ಕಾಮಗಾರಿಯ ಗುಣಮಟ್ಟದಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗಕೂಡದು ಎಂದು ಮೇಲೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಜಮುನಾ ಧರ್ಮೇಂದ್ರ ತಿಳಿಸಿದರು.
ತಾಲ್ಲೂಕಿನ ಚೌಡಸಂದ್ರ ಗ್ರಾಮದಲ್ಲಿ ಶುಕ್ರವಾರ ಎಸ್.ಸಿ.ಪಿ ಯೋಜನೆಯಡಿಯಲ್ಲಿ ಸುಮಾರು ಆರು ಲಕ್ಷ ರೂಗಳ 75 ಮೀಟರ್ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಗ್ರಾಮಗಳಲ್ಲಿ ಕಾಮಗಾರಿ ನಡೆಯುವಾಗ ಪಕ್ಷಾತೀತವಾಗಿ ಜನರು ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಿ ಗ್ರಾಮದ ಒಳಿತಿಗೆ ಸಹಕರಿಸಬೇಕು. ಗ್ರಾಮಗಳಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳಬೇಕು. ಇದರಿಂದ ಆರೋಗ್ಯವೂ ಸುಧಾರಿಸುತ್ತದೆ ಎಂದು ಹೇಳಿದರು.
ಮೇಲೂರು ಗ್ರಾಮ ಪಂಚಾಯತಿ ಉಪಾಧ್ಯಕ್ಷ ಆಂಜನೇಯರೆಡ್ಡಿ, ಸದಸ್ಯರಾದ ಆರ್.ಎ.ಉಮೇಶ್, ಕೆ.ಮಂಜುನಾಥ್, ಮಮತಾ ಲಕ್ಷ್ಮಣ್, ರೂಪೇಶ್, ಕೃಷ್ಣಮೂರ್ತಿ, ಶ್ರೀನಿವಾಸ್, ಮಾಜಿ ಸದಸ್ಯರಾದ ಚಂದ್ರಶೇಖರ್, ವೆಂಕಟೇಶಮೂರ್ತಿ, ಎಚ್.ಟಿ.ನಾರಾಯಣಸ್ವಾಮಿ, ಪಿ.ಎಲ್.ಡಿ ಬ್ಯಾಂಕ್ ಸದಸ್ಯ ಆರ್.ಬಿ.ಜಯದೇವ್, ಎಂ.ಪಿ.ಸಿ.ಎಸ್.ಅಧ್ಯಕ್ಷ ಆನಂದ್, ಮಾಜಿ ಅಧ್ಯಕ್ಷರಾದ ನಾರಾಯಣಸ್ವಾಮಿ, ಕೃಷ್ಣಪ್ಪ, ಮುಖಂಡರಾದ ರಾಜಣ್ಣ, ರಾಮಚಂದ್ರ, ಕೆ.ನಾರಾಯಣಸ್ವಾಮಿ, ಅರ್ಚಕ ವೇಣುಗೋಪಾಲಾಚಾರಿ, ಎಂಜಿನಿಯರ್ ದಿನೇಶ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -