ಕಾಯಕದ ಮಹತ್ವ ತಿಳಿಸಿದ ಯೋಗಿ

- Advertisement -
- Advertisement -

ಕಾಯಕದ ಮಹತ್ವವನ್ನು ತಿಳಿಸಿದ ಮಹಾನ್ ಯೋಗಿ ಸಿದ್ದರಾಮೇಶ್ವರರು ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು.
ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಐದನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
12ನೇ ಶತಮಾನದ ಖ್ಯಾತ ಪಂಚಶರಣರಲ್ಲಿ ಒಬ್ಬರಾದ ಶಿವಯೋಗಿ ಸಿದ್ದರಾಮೇಶ್ವರರು ವೈದಿಕ ಧರ್ಮದ ಮೌಡ್ಯತೆ, ಮೇಲುಕೀಳು, ವರ್ಣಧರ್ಮ ಶ್ರೇಣೀಕರಣ, ಸಂಪ್ರದಾಯಗಳಿಂದ ದೂರ ಉಳಿದು ಎಲ್ಲರೂ ಸಮಾನರು ಎಂಬ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಚಿಂತನೆಯನ್ನು ಆ ಕಾಲದಲ್ಲೇ ಹುಟ್ಟುಹಾಕಿದವರು ಎಂದರು.
ತಹಶೀಲ್ದಾರ್ ಅಜಿತ್ಕುಮಾರ್ ರೈ ಮಾತನಾಡಿ, ದಯೆಯೇ ಧರ್ಮದ ಮೂಲವೆಂದು ಸಾರಿದ ವಚನಕಾರರು ಮೌಡ್ಯದ ವಿರುದ್ಧ ಜನಜಾಗೃತಿ ಮೂಡಿಸಿದ್ದರು. ಕೆರೆ ಕಟ್ಟೆಗಳನ್ನು, ಅನ್ನದಾಸೋಹ ಕಟ್ಟಡಗಳನ್ನು ಕಟ್ಟುವ ಮೂಲಕ ಕಲ್ಲು ಮಣ್ಣಿನ ಕಸುಬಿನ ಮಹತ್ವ ಎತ್ತಿಹಿಡಿದವರು ಸಿದ್ದರಾಮೇಶ್ವರರು. ದೇವರ ಬಗ್ಗೆ ಅಪಾರ ಭಕ್ತಿಯುಳ್ಳ ಶಿವಭಕ್ತರಾಗಿ, ಕರ್ಮಯೋಗಿಯಾಗಿ ಅಕ್ಷರಜ್ಞಾನದಿಂದ ವಚನಗಳನ್ನು ರಚಿಸುವ ಮೂಲಕ ಜ್ಞಾನಯೋಗಿಗಳಾಗಿದ್ದಾರೆ ಎಂದು ಹೇಳಿದರು.
ಬೋವಿ ಜನಾಂಗದ ಹಿರಿಯರನ್ನು ಮತ್ತು ಹೆಚ್ಚು ಅಂಕ ಗಳಿಸಿರುವ ಎಂ.ರೂಪ ಅವರನ್ನು ಗೌರವಿಸಲಾಯಿತು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಎಂ.ವೆಂಕಟೇಶ್, ಉಪಾಧ್ಯಕ್ಷ ಎಚ್.ನರಸಿಂಹಯ್ಯ, ನಗರಸಭೆ ಪ್ರಭಾರಿ ಅಧ್ಯಕ್ಷೆ ಪ್ರಭಾವತಿ ಸುರೇಶ್, ಆಯುಕ್ತ ಜಿ.ಎನ್.ಚಲಪತಿ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಚಂದ್ರಶೇಖರ ಬಾಬು, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಆರ್.ಕೇಶವರೆಡ್ಡಿ, ತಾಲ್ಲೂಕು ಬೋವಿ ಸಂಘದ ಅಧ್ಯಕ್ಷ ಚಿಕ್ಕನರಸಿಂಹಪ್ಪ, ಶ್ರೀನಿವಾಸ್, ರಘು ಹಾಜರಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!