20.4 C
Sidlaghatta
Wednesday, July 16, 2025

ಕಾರ್ತಿಕ ಮಾಸದ ಕೊನೆಯ ಸೋಮವಾರದ ಪ್ರಯುಕ್ತ ವಿಶೇಷ ಪೂಜೆ

- Advertisement -
- Advertisement -

ಕಾರ್ತಿಕ ಮಾಸದ ಕೊನೆಯ ಸೋಮವಾರದ ಪ್ರಯುಕ್ತ ತಾಲ್ಲೂಕಿನ ಸುಗಟೂರು ಗ್ರಾಮದಲ್ಲಿ ಶ್ರೀ ಕಲ್ಲೇಶ್ವರ ಸ್ವಾಮಿ ಮತ್ತು ಶ್ರೀ ಸಿದ್ದರಾಮೇಶ್ವರ ಸ್ವಾಮಿ ದೇವರುಗಳಿಗೆ ವಿಶೇಷ ಪೂಜೆಯನ್ನು ನಡೆಸಲಾಯಿತು.
ದೇವರಿಗೆ ಅಭಿಷೇಕ, ಮಂಗಳರಾತಿ, ತೀರ್ಥ ಪ್ರಸಾದವನ್ನು ವಿನಿಯೋಗಿಸಲಾಯಿತು. ಸಾವಿರಾರು ಮಂದಿ ಭಕ್ತರು ಆಗಮಿಸಿ ದೇವರ ಪೂಜೆಯಲ್ಲಿ ಪಾಲ್ಗೊಂಡಿದ್ದರು. ವೀರಕುಮಾರರ ತೆಂಗಿನಕಾಯಿ ಪವಾಡ ನಡೆಸಿಕೊಟ್ಟರು.
ದೇವಾಲಯದ ಟ್ರಸ್ಟ್ ವತಿಯಿಂದ ಅನ್ನಸಂತರ್ಪಣೆಯನ್ನು ನಡೆಸಲಾಯಿತು. ದೇವಾಲಯವನ್ನು ಮತ್ತು ದೇವರನ್ನು ವಿವಿಧ ಹೂಗಳಿಂದ ಅಲಂಕರಿಸಲಾಗಿತ್ತು. ಅಲಂಕರಿಸಿದ್ದ ಎತ್ತುಗಳನ್ನು ಭಕ್ತರು ಕರೆತಂದಿದ್ದುದು ಆಕರ್ಷಕವಾಗಿತ್ತು. ಸುತ್ತ ಮುತ್ತಲಿನ ಗ್ರಾಮ ಹಾಗೂ ತಾಲ್ಲೂಕುಗಳಿಂದ ಭಕ್ತರು ಆಗಮಿಸಿ ಪೂಜಾ ಕಾರ್ಯದಲ್ಲಿ ಪಾಲ್ಗೊಂಡರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!