ಕಾರ್ತಿಕ ಮಾಸದ ಕೊನೆಯ ಸೋಮವಾರದ ಅಂಗವಾಗಿ ತಾಲ್ಲೂಕಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಹಾಗೂ ಲಕ್ಷದೀಪೋತ್ಸವ ಆಯೋಜನೆ ಮಾಡಲಾಗಿತ್ತು.
ನಗರದ ಕೋಟೆ ವೃತ್ತದಲ್ಲಿರುವ ಸೋಮೇಶ್ವರ ದೇವಾಲಯ ಸೇರಿದಂತೆ ಅಶೋಕ ರಸ್ತೆಯ ನಗರೇಶ್ವರಸ್ವಾಮಿ ದೇವಾಲಯ, ವಾಸವಿ ರಸ್ತೆಯಲ್ಲಿರುವ ವೆಂಕಟೇಶ್ವರಸ್ವಾಮಿ ದೇವಾಲಯ, ಮೇಲೂರಿನ ಈಶ್ವರ ದೇವಾಲಯ, ಚೌಡಸಂದ್ರದ ಸೋಮೇಶ್ವರಸ್ವಾಮಿ ದೇವಾಲಯ, ಬೂದಾಳ ಗ್ರಾಮದ ಮಲೆಮಹದೇಶ್ವರಸ್ವಾಮಿ, ಗವಿಗುಟ್ಟದ ಗವಿಗಂಗಾಧರೇಶ್ವರ, ಅಪ್ಪೇಗೌಡನಹಳ್ಳಿ ಗೇಟ್ ನಲ್ಲಿರುವ ಬೈಲಾಂಜನೇಯ ಸ್ವಾಮಿ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು.
ನೂರಾರು ಮಂದಿ ಭಕ್ತಾದಿಗಳು ಭಾಗವಹಿಸಿ ದೇವರ ದರ್ಶನ ಪಡೆದುಕೊಂಡರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







