21.1 C
Sidlaghatta
Saturday, July 27, 2024

ಕಾರ್ಯಕರ್ತರು ಪ್ರಾಮಾಣಿಕರಾಗಿ ಕೆಲಸ ಮಾಡಬೇಕು

- Advertisement -
- Advertisement -

ಸದಸ್ಯತ್ವ ಅಭಿಯಾನ ಕಾರ್ಯಕ್ರಮ ಮುಖಾಂತರ ಸದಸ್ಯತ್ವದ ಗುರಿಯನ್ನು ಮುಟ್ಟಬೇಕಾದರೆ ಕಾರ್ಯಕರ್ತರು ಪ್ರಾಮಾಣಿಕರಾಗಿ ಕೆಲಸ ಮಾಡಬೇಕು ಎಂದು ಮಾಜಿ ಸಚಿವ ಎಸ್.ಎ.ರಾಮ್ದಾಸ್ ಹೇಳಿದರು.
ಪಟ್ಟಣದ ನಗರೇಶ್ವರ ಕಲ್ಯಾಣಮಂಟಪದಲ್ಲಿ ಸೋಮವಾರ ಆಯೋಜನೆ ಮಾಡಲಾಗಿದ್ದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ರಾಷ್ಟ್ರ ಮತ್ತು ರಾಜ್ಯದ ರಾಜಕಾರಣದಲ್ಲಿ ಪಕ್ಷವನ್ನು ಸದೃಢವಾಗಿ ಬೆಳೆಸಬೇಕಾದರೆ, ಪಕ್ಷದ ಕಾರ್ಯಕರ್ತರು ನಿಷ್ಠಾವಂತರಾಗಿ ಕೆಲಸ ಮಾಡಬೇಕು. ನಮಗೆ ನೀಡಿರುವ ಸದಸ್ಯತ್ವದ ಗುರಿಯನ್ನು ಮುಟ್ಟಬೇಕಾದರೆ, ಪ್ರತಿಯೊಬ್ಬ ಕಾರ್ಯಕರ್ತರು ತಮ್ಮ ಮೇಲಿನ ಜವಾಬ್ದಾರಿಯಿಂದ ಕೆಲಸ ಮಾಡಿ. ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು, ರಾಷ್ಟ್ರದಲ್ಲಿ ಪ್ರಧಾನಿ ನರೇಂದ್ರಮೋದಿಯವರ ದೂರದೃಷ್ಟಿ ಹಾಗೂ ಅವರು ಕೈಗೊಂಡಿರುವ ಜನಪರ ಯೋಜನೆಗಳ ಬಗ್ಗೆ ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡಬೇಕು. ರಾಜ್ಯದಲ್ಲಿನ ಬಿಜೆಪಿ ಸರ್ಕಾರದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳ ಬಗ್ಗೆಯೂ ಸಾರ್ವಜನಿಕರಿಗೆ ತಿಳಿಹೇಳಬೇಕು ಎಂದರು.
ಬಿಜೆಪಿ ತಾಲ್ಲೂಕು ಅಧ್ಯಕ್ಷ ಕಂಬದಹಳ್ಳಿ ಸುರೇಂದ್ರಗೌಡ ಮಾತನಾಡಿ, ತಾಲ್ಲೂಕಿನಾಧ್ಯಂತ ನಾಗರಿಕರ ಮನವೊಲಿಸಿ ಸುಮಾರು ೫೦ ಸಾವಿರ ಮಂದಿ ಸದಸ್ಯರನ್ನು ಮಾಡುವ ಗುರಿಯನ್ನು ಹೊಂದಿದ್ದು, ತಾಲ್ಲೂಕಿನ ಎಲ್ಲಾ ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಂಡು ಅಭಿಯಾನವನ್ನು ಯಶಸ್ವಿ ಮಾಡಬೇಕು. ಪ್ರತಿಯೊಂದು ಗ್ರಾಮದಲ್ಲಿಯೂ ಸದಸ್ಯರನ್ನು ಮಾಡುವ ಮುಖಾಂತರ ಪಕ್ಷವನ್ನು ಬಲವರ್ಧನೆ ಮಾಡಬೇಕು ಎಂದರು.
ಬಿಜೆಪಿ ರಾಷ್ಟ್ರೀಯ ಉಸ್ತುವಾರಿ ಶಂಕರನಾರಾಯಣರೆಡ್ಡಿ, ಜಿಲ್ಲಾ ಉಸ್ತುವಾರಿ ಚಂದ್ರಶೇಖರ್, ಬಿಜೆಪಿ ಮುಖಂಡರಾದ ದಾಮೋದರ್, ಶಿವಕುಮಾರಗೌಡ, ಶ್ರೀಧರ್, ಸಿ.ವಿ.ಲೋಕೇಶ್ಗೌಡ, ನಂದೀಶ್, ತ್ಯಾಗರಾಜ್, ಸುಜಾತಮ್ಮ, ಮಂಜುಳಮ್ಮ, ರತ್ನಮ್ಮ, ಶಿವಮ್ಮ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!