ತಾದೂರು ಕ್ಷೇತ್ರದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಎರಡೂ ಮಹಿಳೆಯರ ಸ್ಥಾನದ ವಿಜೇತ ಅಭ್ಯರ್ಥಿಗಳನ್ನು ಅಭಿನಂದಿಸಿ ಜೆಡಿಎಸ್ ಮುಖಂಡ ಮೇಲೂರು ಬಿ.ಎನ್.ರವಿಕುಮಾರ್ ಮಾತನಾಡಿದರು.
ಜೆಡಿಎಸ್ ಕಾರ್ಯಕರ್ತರ ಸಾಂಘಿಕ ಪ್ರಯತ್ನದಿಂದಾಗಿ ಈ ಬಾರಿಯ ನಾಲ್ಕು ಗ್ರಾಮ ಪಂಚಾಯಿತಿಗಳ ಚುನಾವಣೆಯಲ್ಲಿ ಎರಡನ್ನು ಜೆಡಿಎಸ್ ಬೆಂಬಲಿತರು ಗೆಲ್ಲುವಂತಾಯಿತು ಎಂದು ಅವರು ತಿಳಿಸಿದರು.
ಕಳೆದ ಬಾರಿ ನಾಗಮಂಗಲ ಗ್ರಾಮ ಪಂಚಾಯಿತಿಯಲ್ಲಿ ಜೆಡಿಎಸ್ ಬೆಂಬಲಿತರು ಕೇವಲ ಒಬ್ಬರಿದ್ದರು. ಆದರೆ ಈ ಬಾರಿ ನಾಲ್ಕು ಸ್ಥಾನ ಪಡೆಯುವುದರೊಂದಿಗೆ ಗ್ರಾಮ ಪಂಚಾಯಿತಿಯಲ್ಲಿ ಜೆಡಿಎಸ್ ಚುಕ್ಕಾಣಿ ಹಿಡಿಯುವಂತಾಗಿದೆ. ಭಕ್ತರಹಳ್ಳಿ ಗ್ರಾಮ ಪಂಚಾಯಿತಿಯನ್ನು ನಾವು ಉಳಿಸಿಕೊಳ್ಳುವಲ್ಲಿ ಸಫಲರಾಗಿದ್ದೇವೆ. ಮಳಮಾಚನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಈ ಬಾರಿ ಒಂದು ಸ್ಥಾನ ಹೆಚ್ಚಾಗಿ ಪಡೆದಿದ್ದೇವೆ. ಚೀಮಂಗಲ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯೆ ತನುಜಾ ರಘು ಅವರ ಸ್ವಕ್ಷೇತ್ರದ ತಾದೂರಿನಲ್ಲಿ ಸರಸ್ವತಮ್ಮ ಮುನಿಕೃಷ್ಣಪ್ಪ ಮತ್ತು ಸುನಿತಾ ವೆಂಕಟಸ್ವಾಮಿ ಗೆಲ್ಲುವ ಮೂಲಕ ಜೆಡಿಎಸ್ ಪ್ರಾಬಲ್ಯ ಮೆರೆದಿದೆ. ಪಕ್ಷ ದ್ರೋಹಿಗಳನ್ನು ಮಟ್ಟ ಹಾಕಿದಾಗ ಮಾತ್ರ ಪಕ್ಷವನ್ನು ಬಲಪಡಿಸಲು ಸಾಧ್ಯ ಎಂದು ನುಡಿದರು.
ಸರಸ್ವತಮ್ಮ ಮುನಿಕೃಷ್ಣಪ್ಪ, ಸುನಿತಾ ವೆಂಕಟಸ್ವಾಮಿ, ಪ್ರಭಾಕರ್(ಪಿಳ್ಳ), ಗೋಪಾಲ್, ಕೆ.ಮುರಳಿ, ವಿ.ವೆಂಕಟೇಶಪ್ಪ, ಮುನಿಕೃಷ್ಣಪ್ಪ ಹಾಜರಿದ್ದರು.