ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುದವಾರ ಆಯೋಜಿಸಲಾಗಿದ್ದ ತಾಲ್ಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.
ಶುದ್ದಕುಡಿಯುವ ನೀರು ಪೂರೈಕೆ ಹಾಗೂ ಸರ್ಕಾರಿ ಸೌಲಭ್ಯಗಳನ್ನು ಕ್ಷೇತ್ರದ ಜನತೆಗೆ ತಲುಪಿಸುವಂತಹ ಮಹತ್ತರವಾದ ಜವಾಬ್ದಾರಿ ಅಧಿಕಾರಿಗಳ ಮೇಲಿದೆ. ಅಧಿಕಾರಿಗಳ ಬದ್ಧತೆಯಿಂದಲೇ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಹೇಳಿದರು.
ತಾಲ್ಲೂಕು ಮಟ್ಟದ ಅಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿಬರುತ್ತಿದ್ದು, ಅದನ್ನು ಸರಿಪಡಿಸಿಕೊಂಡು ಕೆಲಸ ಮಾಡಿದರೆ ಉತ್ತಮ ಇಲ್ಲವಾದಲ್ಲಿ ಶಿಸ್ತು ಕ್ರಮ ಜರುಗಿಸುವುದು ಅನಿವಾರ್ಯವಾಗಿರುತ್ತದೆ ಎಂದರು.
ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಲಕ್ಷಾಂತರ ರೂಗಳ ಕಾಮಗಾರಿಗಳು ಅಪೂರ್ಣವಾಗಿ ಉಳಿದಿವೆ. ಕೂಡಲೇ ಸಂಬಂದಪಟ್ಟ ಅಧಿಕಾರಿಗಳು ಕಾಮಗಾರಿ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ತಾಕೀತು ಮಾಡಿದರು. ಟೆಂಡರ್ ಮುಗಿದು ಕಾಮಗಾರಿ ಆರಂಭವಾದ ನಂತರ ಗುತ್ತಿಗೆದಾರರು ಸಮರ್ಪಕವಾಗಿ ಕಾರ್ಯನಿರ್ವಹಣೆ ಮಾಡುತ್ತಿರುವ ಬಗ್ಗೆ ಅಧಿಕಾರಿಗಳು ಮೇಲುಸ್ತುವಾರಿ ವಹಿಸಿ ಕೆಲಸ ಮಾಡಬೇಕು. ೨೦೧೭-೧೮ ನೇ ಸಾಲಿನಲ್ಲಿ ಆರಂಭವಾಗಿರುವ ಬಹಳಷ್ಟು ಕಾಮಗಾರಿಗಳು ಈವರೆಗೂ ಪೂರ್ಣಗೊಂಡಿಲ್ಲ. ಅನುದಾನ ಬಿಡುಗಡೆಯಾಗುವದಷ್ಟೆ ಮುಖ್ಯವಲ್ಲ. ಕಾಮಗಾರಿ ಪೂರ್ಣಗೊಳಿಸುವಲ್ಲಿ ಅಧಿಕಾರಿಗಳು ನೇರ ಹೊಣೆಗಾರರಾಗಿರುತ್ತಾರೆ. ಯಾವುದೇ ಕಾಮಗಾರಿಯಾಗಲಿ ಕಾಲಮಿತಿಯೊಳಗೆ ಪುರ್ಣಗೊಳಿಸುವಂತೆ ಸೂಚಿಸಿದರು.
ತಾಲ್ಲೂಕು ಮಟ್ಟದ ಎಲ್ಲಾ ಇಲಾಖೆಗಳಲ್ಲಿ ಆಗಿರುವ ಪ್ರಗತಿಯ ಕುರಿತು ಮಾಹಿತಿ ಪಡೆದುಕೊಂಡ ಅವರು, ಸರ್ಕಾರದ ಯೋಜನೆಗಳು ಸಮರ್ಪಕವಾಗಿ ಅರ್ಹಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಅಧಿಕಾರಿಯೂ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಗ್ರಾಮೀಣ ಪ್ರದೇಶದ ಹಳ್ಳಿ ಹಳ್ಳಿಗೂ ಶುದ್ದ ಕುಡಿಯುವ ನೀರು ಪೂರೈಕೆ ಮಾಡುವುದರ ಜೊತೆಗೆ ಲಭ್ಯತೆಯಿರುವ ನೀರನ್ನು ಸಮರ್ಪಕವಾಗಿ ವಿತರಣೆ ಮಾಡಲು ಅಧಿಕಾರಿಗಳು ಮುಂದಾಗಬೇಕು ಎಂದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಿ.ಶಿವಕುಮಾರ್, ನಗರಸಭೆ ಆಯುಕ್ತ ಚಲಪತಿ, ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
- Advertisement -
- Advertisement -
- Advertisement -