ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಜೊತೆಯಲ್ಲಿಯೇ ಮುಂದಿನ ಜೀವನದ ಬಗ್ಗೆ ನಿರ್ದಿಷ್ಠ ಯೋಜನೆ ರೂಪಿಸಿಕೊಳ್ಳಬೇಕು ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜನೆ ಮಾಡಲಾಗಿದ್ದ ೨೦೧೭-೧೮ ನೇ ಸಾಲಿನ ಕಾಲೇಜು ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬ ವಿದ್ಯಾರ್ಥಿಯೂ ಉತ್ತಮ ಶಿಕ್ಷಣ ಪಡೆದು ಪದವೀಧರನಾಗುವುದರೊಂದಿಗೆ ಪೋಷಕರಿಗೆ ಗೌರವ ತರುವ ರೀತಿಯಲ್ಲಿ ನಡೆದುಕೊಳ್ಳಬೇಕು. ದೇಶದ ಉತ್ತಮ ಪ್ರಜೆಯಾಗಿ ರೂಪಗೊಳ್ಳಬೇಕು. ಶಿಕ್ಷಣದ ಜೊತೆಗೆ ಸಮಾಜದ ಹಾಗು ತಮ್ಮ ಸುತ್ತಮುತ್ತಲಿನ ಪರಿಸರದ ಬಗ್ಗೆ ಚಿಂತನೆ ನಡೆಸುವಂತವರಾಗಬೇಕು ಎಂದರು.

ಶಿಕ್ಷಣ ಎಂಬುವುದು ಮನುಷ್ಯನಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುತ್ತದೆಯಾದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯೂ ಸಮಾಜದ ಮಾದರಿ ವ್ಯಕ್ತಿಯಾಗಿ ರೂಪುಗೊಂಡು ದೇಶದ ಬೆನ್ನೆಲುಬಾಗಬೇಕು ಎಂದರು.
ಮುಖ್ಯಭಾಷಣಕಾರರಾಗಿ ಬಿಜಿಎಸ್ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಆರ್.ಮಹದೇವ್ ಮಾತನಾಡಿ ವಿದ್ಯಾರ್ಥಿಗಳಿಗೆ ಯಾವುದೂ ಸುಲಭವಾಗಿ ಸಿಗುವುದಿಲ್ಲ. ಹಾಗಾಗಿ ಕಷ್ಟಪಟ್ಟು ಓದುವುದರ ಜೊತೆಗೆ ಓದಿದ ವಿಷಯವನ್ನು ನೆನಪಿನಲ್ಲಿಟ್ಟುಕೊಳ್ಳುವುದು ಮುಖ್ಯ. ಪರೀಕ್ಷೆಗಳು ಸಮೀಪಿಸಿದಾಗ ಮಾತ್ರ ಓದಿದರೆ ಸಾಲದು ವರ್ಷವಿಡೀ ಓದುವುದನ್ನುರೂಡಿಸಿಕೊಳ್ಳಬೇಕು. ಜ್ಞಾನದ ಜೊತೆಗೆ ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕು. ನಾಗರೀಕತೆ ಹಾಗು ಮನರಂಜನೆಯ ಹೆಸರಿನಲ್ಲಿ ತಪ್ಪು ದಾರಿ ಹಿಡಿಯಬಾರದು. ಸಭ್ಯ ನಾಗರೀಕ ಸಮಾಜವನ್ನು ನಿರ್ಮಿಸುವುದೇ ಶಿಕ್ಷಣದ ಗುರಿಯಾಗಿದ್ದು ಉತ್ತಮ ವಿದ್ಯಾರ್ಥಿಗಳನ್ನು ರೂಪಿಸುವ ಜವಾಬ್ದಾರಿ ಹಾಗು ಹೊಣೆಗಾರಿಕೆ ಶಿಕ್ಷಕರ ಮೇಲಿದೆ ಎಂದರು.
ಕಾರ್ಯಕ್ರಮದಲ್ಲಿ ಕ್ರೀಡಾ ಹಾಗು ಸಾಂಸ್ಕೃತಿಕ ಸ್ಪರ್ದೆಗಳಲ್ಲಿ ವಿಜೇತರಾದ ವಿದ್ಯಾಥಿಗಳಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ನಗರಸಭೆ ಪ್ರಭಾರಿ ಅಧ್ಯಕ್ಷೆ ಪ್ರಭಾವತಿ ಸುರೇಶ್, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎನ್.ಆನಂದ್, ತಹಸೀಲ್ದಾರ್ ಎಸ್.ಅಜಿತ್ಕುಮಾರ್ರೈ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಚಂದ್ರಶೇಖರ್ಬಾಬು, ಪೌರಾಯುಕ್ತ ಜಿ.ಎನ್.ಚಲಪತಿ, ಉಪನ್ಯಾಸಕರಾದ ಸಿ.ವೆಂಕಟೇಶರೆಡ್ಡಿ, ಹೆಚ್.ಸಿ.ಮುನಿರಾಜು ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







