26 C
Sidlaghatta
Thursday, July 31, 2025

ಕುಷ್ಠರೋಗ ಅರಿವು ಆಂದೋಲನ ಜಾಥಾ

- Advertisement -
- Advertisement -

ಕುಷ್ಠರೋಗ ನಿವಾರಣೆಯಾಗುವಂತಹ ರೋಗ. ಆರಂಭದ ದಿನಗಳಲ್ಲಿ ಪತ್ತೆ ಹಿಡಿದು ಸೂಕ್ತ ಚಿಕಿತ್ಸೆ ನೀಡಿದಲ್ಲಿ ಕುಷ್ಠರೋಗ ಗುಣಮುಖವಾಗುತ್ತದೆ ಎಂದು ಮುಖ್ಯ ಶಿಕ್ಷಕ ಬೈಯಣ್ಣ ತಿಳಿಸಿದರು.
ತಾಲ್ಲೂಕಿನ ನಾಗಮಂಗಲ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಕುಷ್ಠರೋಗ ನಿವಾರಣೆಯ ಬಗ್ಗೆ ಜಾಥ ಹಾಗೂ ಅರಿವುಮೂಡಿಸುವ “ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕುಷ್ಠರೋಗವನ್ನು ಬಹು ಔಷಧಿ ಚಿಕಿತ್ಸೆಯಿಂದ ಸಂಪೂರ್ಣವಾಗಿ ಗುಣಪಡಿಸಬಹುದು. ಪ್ರಾರಂಭಿಕ ಹಂತದಲ್ಲಿ ಗುರ್ತಿಸಿ ಕ್ರಮಬದ್ಧ ಚಿಕಿತ್ಸೆ ಪಡೆದಲ್ಲಿ ಅಂಗವಿಕಲತೆ ತಡೆಗಟ್ಟಬಹುದು ಎಂದರು.
ಗ್ರಾಮದಲ್ಲಿ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು, ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಜಾಥಾ ನಡೆಸಿ ಜನರಲ್ಲಿ ಅರಿವು ಮೂಡಿಸಿದರು.
ಶಿಕ್ಷಕಿ ನಾಗವೇಣಿ, ಕಿರಿಯ ಆರೋಗ್ಯ ಸಹಾಯಕಿ ನಕ್ಷತ್ರ ಮೇರಿ, ಅಂಗನವಾಡಿ ಕಾರ್ಯಕರ್ತೆಯರಾದ ಭವ್ಯ, ಕನಕರತ್ನಮ್ಮ, ಆಶಾಕಾರ್ಯಕತೆಯರಾದ ಪ್ರಭಾವತಿ, ಸುಶೀಲ, ಶಾಂತಮ್ಮ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!