ರೈತರು ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಅಧಿಕ ಇಳುವರಿ ಪಡೆಯುವ ಮೂಲಕ ಆರ್ಥಿಕವಾಗಿ ಸದೃಡರಾಗಬೇಕು ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ತಾಲ್ಲೂಕಿನ ಸಾದಲಿ ಗ್ರಾಮದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಸೋಮವಾರ ಏರ್ಪಡಿಸಲಾಗಿದ್ದ ಸಾದಲಮ್ಮ ತೋಟಗಾರಿಕೆ ರೈತ ಉತ್ಪಾದಕರ ಕಂಪನಿಯನ್ನು ಉದ್ಘಾಟಿಸಿ ಮಾತನಾಡಿದರು.
ಬಯಲುಸೀಮೆ ಭಾಗದ ರೈತರು ಆಧುನಿಕ ತಂತ್ರಜ್ಞಾನ, ಯಂತ್ರೋಪಕರಣಗಳನ್ನು ಬಳಸಿ ಅಧಿಕ ಇಳುವರಿ ಪಡೆಯುವ ಮೂಲಕ ಹೆಚ್ಚು ಲಾಭ ಪಡೆದುಕೊಳ್ಳಬಹುದು.
ಕೃಷಿ ಮತ್ತು ತೋಟಗಾರಿಕೆಯಲ್ಲಿ ಉತ್ಪಾದಕರಿಗಿಂತಲೂ ಮದ್ಯವರ್ತಿಗಳು ಹಾಗೂ ದಲ್ಲಾಳಿಗಳೇ ಹೆಚ್ಚಿನ ಲಾಭ ಪಡೆಯುವುದನ್ನು ರೈತ ಉತ್ಪಾದಕರ ಕಂಪನಿ ದೂರವಾಗಿಸಬೇಕು. ಇಲ್ಲಿ ಯಾವುದೇ ರಾಜಕೀಯ ನುಸುಳದಂತೆ ಕಾರ್ಯ ನಿರ್ವಹಿಸುವ ಮೂಲಕ ಈ ಭಾಗದ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದರು.
ತೋಟಗಾರಿಕೆ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಕೆ.ರಘು ಮಾತನಾಡಿ ಜಿಲ್ಲೆಯಲ್ಲಿಯೇ ಮೊಟ್ಟ ಮೊದಲ ರೈತ ಉತ್ಪಾದಕರ ಕಂಪನಿ ಇದಾಗಿದ್ದು ತೋಟಗಾರಿಕೆ ಅಗತ್ಯವಾದ ಎಲ್ಲಾ ಪರಿಕರಿಗಳು ಕಂಪನಿಯಿಂದ ರೈತನಿಗೆ ನೇರವಾಗಿ ಸಿಗಲಿದೆ ಎಂದರು.
ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಪಿ.ನಿರ್ಮಲ ಮುನಿರಾಜು, ತಾಲ್ಲೂಕು ಪಂಚಾಯತಿ ಅಧ್ಯಕ್ಷ ಕೆ.ಲಕ್ಷ್ಮಿನಾರಾಯಣ, ಸಾದಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಗೋವಿಂದರಾಜು, ಸಾದಲಮ್ಮ ರೈತ ಉತ್ಪಾದಕರ ಕಂಪನಿ ಅಧ್ಯಕ್ಷ ಶ್ರೀನಿವಾಸ್, ಉಪಾಧ್ಯಕ್ಷೆ ಅಶ್ವತ್ಥಮ್ಮ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಆನಂದ್ ಮತ್ತಿತರರು ಹಾಜರಿದ್ದರು.
- Advertisement -
- Advertisement -
- Advertisement -
- Advertisement -