19.9 C
Sidlaghatta
Sunday, July 20, 2025

ಕೃಷಿಯಲ್ಲಿ ವೈಜ್ಞಾನಿಕ ಪದ್ಧತಿ ಅಳವಡಿಸಿಕೊಳ್ಳಿ

- Advertisement -
- Advertisement -

ರೈತರು ಕೃಷಿಯಲ್ಲಿ ವೈಜ್ಞಾನಿಕ ಪದ್ಧತಿಯನ್ನು ಅಳವಡಿಸಿಕೊಳ್ಳುವ ಮೂಲಕ ಉತ್ತಮ ಬೆಳೆ ಬೆಳೆದು ಆರ್ಥಿಕವಾಗಿ ಸದೃಢರಾಗಬೇಕೆಂದು ಶಾಸಕ ಎಂ. ರಾಜಣ್ಣ ತಿಳಿಸಿದರು.
ಗರದ ಸ್ತ್ರೀಶಕ್ತಿ ಭವನದಲ್ಲಿ ಶುಕ್ರವಾರ ನಡೆದ ರೈತ ದಿನಾಚರಣೆ ಮತ್ತು ಸುರಕ್ಷಿತ ಕೀಟನಾಶಕಗಳ ಬಳಕೆಯ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರೈತರು ದೇಶದ ಬೆನ್ನೆಲುಬು. ರೈತರ ಶ್ರಮಕ್ಕೆ ತಕ್ಕ ಆದಾಯ ಸಿಗುತ್ತಿಲ್ಲ, ರೈತರಿಗೆ ಮುಖ್ಯವಾಗಿ ಬೇಕಾಗಿರುವುದು ನೀರು, ನಮ್ಮ ಬಯಲುಸೀಮೆ ಪ್ರದೇಶಗಳಲ್ಲಿ ನೀರಿನ ಬವಣೆಯು ಹೆಚ್ಚಾಗಿದ್ದು ರೈತರು ಕಂಗಾಲಾಗಿದ್ದಾರೆ. ಮುಂದಿನ ದಿನಗಳಲ್ಲಿ ಸರ್ಕಾರ ಎಚ್ಚೆತ್ತುಕೊಂಡು ರೈತರಿಗೆ ಹೆಚ್ಚಿನ ಸವಲತ್ತುಗಳನ್ನು ಕೊಟ್ಟು ಕೃಷಿ ಕ್ಷೇತ್ರವನ್ನು ಅಬಿವೃದ್ಧಿಪಡಿಸಬೇಕೆಂದು ತಿಳಿಸಿದರು.
ರೈತ ಸಂಘದ ತಾಲ್ಲೂಕು ಅಧ್ಯಕ್ಷ ತಾದೂರು ಮಂಜುನಾಥ್ ಮಾತನಾಡಿ, ರೈತ ದಿನಾಚರಣೆಯು ಕೇವಲ ಆಚರಣೆಗೆ ಸೀಮಿತವಾಗದೆ ಅರ್ಥ ಪೂರ್ಣವಾಗಿ ಕಾರ್ಯಗತವಾಗಬೇಕು. ರೈತ ದಿನಾಚರಣೆಯನ್ನು ಕೃಷಿ ಭೂಮಿಯಲ್ಲಿ ನಡೆಸಿದರೆ ನಿಜಕ್ಕೂ ಉಪಯುಕ್ತ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಆಳಕ್ಕೆ ಕೊರೆದಂತೆಲ್ಲಾ ನೀರು ಸಿಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ರೈತರು ಕೃಷಿಯನ್ನು ಅವಲಂಬಿಸಿ ಜೀವನ ಮಾಡುವುದು ಕಷ್ಟಕರವಾಗಿದೆ. ಸರ್ಕಾರ ರೈತರ ಹಿತದೃಷ್ಟಿಯಿಂದ ನೀರಾವರಿ ಸಮಸ್ಯೆಯನ್ನು ಹೋಗಲಾಡಿಸಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ರೈತರಿಗೆ ಸುರಕ್ಷಿತ ಕೀಟನಾಶಕಗಳ ಬಳಸುವ ಬಗ್ಗೆ ಮತ್ತು ಕೀಟನಾಶಕಗಳನ್ನು ಸಿಂಪಡಿಸುವಾಗ ಕೈಗೊಳ್ಳುವ ಮುನ್ನೆಚರಿಕೆ ಕ್ರಮಗಳ ಮಾಹಿತಿ ನೀಡಲಾಯಿತು.
ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ದೇವೇಗೌಡ, ತೋಟಗಾರಿಕೆಯ ಸಹಾಯಕ ನಿರ್ದೇಶಕ ಆನಂದ್, ರಾಜ್ಯ ರೈತ ಸಂಘದ ತಾಲ್ಲೂಕು ಅಧ್ಯಕ್ಷ ರವಿಪ್ರಕಾಶ್, ಪ್ರಗತಿಪರ ರೈತ ಸುರೇಶ್, ಜಿಲ್ಲಾ ಕೃಷಿಕ ಸಮಾಜದ ಉಪಾದ್ಯಕ್ಷ ಕೆಂಪೆಗೌಡ, ದೇವರಾಜು, ಪ್ರತೀಶ್, ಕೃಷಿ ಅಧಿಕಾರಿ ಗೋಪಾಲ್ ರಾವ್ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!