ಪುತಿನ ಅವರು “ಗೋಕುಲ ನಿರ್ಗಮನ” ನಾಟಕದಲ್ಲಿ, ಕೃಷ್ಣನಿಲ್ಲದ ಗೋಕುಲ ಆತನ ನೆನಪನ್ನೇ ಮಿಡಿಯುತ್ತಿರುವ ಸನ್ನಿವೇಶವನ್ನು ‘ಇದ್ದುದು ದಿಟ, ಅವನೊಲಿದುದು ದಿಟ, ನಾವು ನಲಿದುದು ದಿಟ, ಬಹ ನೆಚ್ಚು ದಿಟ’ ಎಂಬ ವರ್ಣನೆಯಂತೆ ಎಂದೆಂದೂ ಮುಗಿಯದ ವಸಂತಕ್ಕಾಗಿ ನಿರೀಕ್ಷಿಸುತ್ತಲೇ ಕೃಷ್ಣನನ್ನು ಬೀಳ್ಕೊಟ್ಟ ಗೋಕುಲ, ಅದರೊಳಗೆ ಬದುಕಿದ್ದ ರಾಧೆ, ಅವಳ ಗೆಳತಿಯರು -ಇವರೆಲ್ಲರನ್ನೂ ಸಚಿತ್ರವಾಗಿ ರೂಪಿಸಲಾಗಿತ್ತು.
ಗೋಕುಲದ ನದಿ, ಮರ ಗಿಡ, ಕೃಷ್ಣನ ಪ್ರೀತಿಯ ಬೆಣ್ಣೆ ಮತ್ತು ಸಿಹಿತಿನಿಸುಗಳೊಂದಿಗೆ ನೂರೆಂಟು ವಿಧದ ತಿನಿಸುಗಳನ್ನಿಟ್ಟು ಪೂಜಿಸಲಾಯಿತು. ಸುತ್ತಮುತ್ತಲಿನ ಮನೆಗಳವರು, ಮಕ್ಕಳು ಬಂದು ಭಾಗವತದ ಪ್ರಮುಖ ಘಟ್ಟ ಹಾಗೂ ಬಾಲಕೃಷ್ಣನ ಬಾಲ ಲೀಲೆಗಳನ್ನು ಕಂಡು ಪ್ರಸಾದವನ್ನು ಪಡೆದರು.
‘ಸುಮಾರು ಹದಿನೈದು ವರ್ಷಗಳಿಂದ ಕೃಷ್ಣ ಜನ್ಮಾಷ್ಠಮಿಯನ್ನು ವಿಶೇಷವಾಗಿ ಆಚರಿಸಿಕೊಂಡು ಬರುತ್ತಿದ್ದು, ಒಂದೊಂದು ವರ್ಷ ಒಂದೊಂದು ಕೃಷ್ಣ ಮಹಿಮೆಯನ್ನು ವ್ಯಕ್ತವಾಗುವಂತೆ ಅಲಂಕಾರ ಮಾಡುತ್ತೇವೆ. ಈ ಬಾರಿ ಕೃಷ್ಣನು ಗೋಕುಲದಲ್ಲಿ ಗೋಪಿಕಾ ಸ್ತ್ರೀಯರನ್ನು ಗೋಳು ಹೊಯ್ದುಕೊಳ್ಳುತ್ತಾ ಅವರೆಲ್ಲರ ಪ್ರೀತಿಪಾತ್ರನಾಗುವುದನ್ನು ಪ್ರದರ್ಶಿಸಿದ್ದೇವೆ. ಮಕ್ಕಳಿಗೆ ಈ ರೀತಿಯ ಪ್ರತಿಕೃತಿಗಳ ಮೂಲಕ ಶ್ರೀಕೃಷ್ಣನ ಲೀಲೆಗಳು ಹಾಗೂ ಭಾಗವತದ ಕಥೆಯನ್ನು ತಿಳಿಸುವ ಪ್ರಯತ್ನವನ್ನು ಮಾಡಿದ್ದೇವೆ’ ಎಂದು ಗೌಡರಬೀದಿಯ ಮಂಜುನಾಥ್ ತಿಳಿಸಿದರು.
- Advertisement -
- Advertisement -
- Advertisement -
- Advertisement -