ಕೆಂಪೇಗೌಡರು ಎಲ್ಲಾ ಸಮುದಾಯದ ಅಭಿವೃದ್ಧಿಗೂ ಶ್ರಮಿಸಿದ್ದಾರೆ

- Advertisement -
- Advertisement -

ಕೆಂಪೇಗೌಡರು ಕೇವಲ ಒಂದು ಸಮುದಾಯ ಹಾಗೂ ಜಾತಿಗೆ ಸೀಮಿತವಾಗಿಲ್ಲ. ಎಲ್ಲಾ ಸಮುದಾಯದ ಅಭಿವೃದ್ಧಿಗೂ ಶ್ರಮಿಸಿದ್ಧಾರೆ. ಈ ದಿಸೆಯಲ್ಲಿ ಎಲ್ಲಾ ಸಮುದಾಯವರು ಅವರ ಕೆಲಸವನ್ನು ಸ್ಮರಿಸುವ ಕೆಲಸ ಆಗಬೇಕಿದೆ ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು.
ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಸೋಮವಾರ ಆಚರಿಸಿದ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಧೈರ್ಯ, ಸಾಹಸ, ರಾಷ್ಟ್ರಪ್ರೇಮ, ನಿಸ್ವಾರ್ಥ ಗುಣಗಳಿಂದಲೇ ಪ್ರಜೆಗಳ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟ ನಾಡಪ್ರಭು ಕೆಂಪೇಗೌಡ ಅವರನ್ನು ಆಗಿನ ಜನರು ಜೀವಂತ ದೇವರಂತೆ ಕಾಣುತ್ತಿದ್ದರು. ಕನ್ನಡ ನಾಡಿನಲ್ಲಿ ಅತಿ ಶ್ರೇಷ್ಠ ಪ್ರಜಾ ಪರಿಪಾಲಕರ ಪೈಕಿ ಕೆಂಪೇಗೌಡರು ವಿಶೇಷ ಸ್ಥಾನ ಗಳಿಸಿದ್ದಾರೆ. ಯಲಹಂಕದಲ್ಲಿ ಕ್ರಿ.ಶ 1510ರಲ್ಲಿ ಜನಿಸಿದ ಕೆಂಪೇಗೌಡರು, ವಿಜಯನಗರ ಚಕ್ರೇಶ್ವರ ಶ್ರೀಕೃಷ್ಣದೇವರಾಯರ ಪರಮಾಪ್ತ ಮಾಂಡಲೀಕರಾಗಿದ್ದರು. ಕ್ರಿ.ಶ 1537ರಲ್ಲಿ ಈ ಅತ್ಯದ್ಭುತ ಬೆಂಗಳೂರು ನಗರ ಹಾಗೂ ಆಗಿನ ಬೆಂದಕಾಳೂರನ್ನು ಕಟ್ಟಿದರು ಎಂದು ಹೇಳಿದರು.
ಮನುಷ್ಯ ತನ್ನ ಆಸೆಗೆ ಅರಣ್ಯಗಳನ್ನು, ಮರ ಗಿಡಗಳನ್ನು ಕಡಿದು ಹಾಕಿರುವ ಪರಿಣಾಮ ಮಳೆ ಇಲ್ಲದೆ ಕೆರೆಗಳು ಬತ್ತಿ ಹೋಗಿದ್ದು, ಅಂತರ್ಜಲ ಮಟ್ಟ ಕುಸಿದಿದೆ. ಇಂದಿನವರು ನಾಡಪ್ರಭು ಕೆಂಪೇಗೌಡರ ಆದರ್ಶಗಳನ್ನು ಪಾಲನೆ ಮಾಡಿದಲ್ಲಿ ದೇಶ ಸುಭೀಕ್ಷವಾಗುವುದರಲ್ಲಿ ಸಂದೇಹವಿಲ್ಲ ಎಂದು ತಿಳಿಸಿದರು.
ತಹಸಿಲ್ದಾರ್ ಅಜಿತ್ ಕುಮಾರ್ ರೈ ಮಾತನಾಡಿ, ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ನಾಮಕರಣ ಮಾಡಿ ಅವರಿಗೆ ಗೌರವ ಸೂಚಿಸಲಾಗಿದೆ. ಅವರ ದೇಶ ಪ್ರೇಮವನ್ನು, ಅವರ ಆದರ್ಶಗಳನ್ನು ಇಂದಿನ ಯುವಜನತೆ ಪಾಲಿಸಿ ಎಂದು ಕರೆನೀಡಿದರು.
ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ,ಯು,ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ಎಲ್ಲಾ ಸಮುದಾಯದ ಐವತ್ತು ಮಂದಿ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು.
ತಾಲ್ಲೂಕು ಪಂಚಾಯ್ತಿ ಸದಸ್ಯೆ ಶೋಭಾ ಶಶಿಕುಮಾರ್‌, ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ, ಸಿಡಿಪಿಒ ಲಕ್ಷ್ಮೀದೇವಮ್ಮ, ನಗರಸಭಾ ಆಯುಕ್ತ ಛಲಪತಿ, ನಗರಸಭಾ ಉಪಾಧ್ಯಕ್ಷೆ ಪ್ರಭಾವತಿ ಸುರೇಶ್, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೇಶವರೆಡ್ಡಿ, ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ಒಕ್ಕಲಿಗ ಯುವಸೇನೆ ಸಂಘದ ಅಧ್ಯ್ಯಕ್ಷ ವೆಂಕಟಸ್ವಾಮಿ, ಎ.ಎಂ.ತ್ಯಾಗರಾಜ್‌, ಕೆಂಪರೆಡ್ಡಿ, ದೇವರಾಜ್‌, ಸುಬ್ಬಾರೆಡ್ಡಿ ಕಾರ್ಯಕ್ರಮದಲ್ಲಿ ಹಾಜರಿದ್ದರು.
 

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!