ತಾಲ್ಲೂಕಿನಲ್ಲಿ ಕೆಂಪೇಗೌಡರ ಜಯಂತ್ಯುತ್ಸವವನ್ನು ಅದ್ಧೂರಿಯಾಗಿ ಆಚರಿಸಬೇಕೆಂದು ಒಕ್ಕಲಿಗ ಸಮುದಾಯದ ಮುಖಂಡರು ಒಕ್ಕೊರಲಿನ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ತಾಲ್ಲೂಕಿನ ವರದನಾಯಕನಹಳ್ಳಿ ಗೇಟ್ನ ಶ್ರೀ ಬಾಲಾಜಿ ಕಲ್ಯಾಣಮಂಟಪದಲ್ಲಿ ಕೆಂಪೇಗೌಡ ಆಚರಣಾ ಸಮಿತಿಯಿಂದ ಶನಿವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಪಕ್ಷಾತೀತವಾಗಿ ಒಕ್ಕಲಿಗ ಜನಾಂಗದ ಮುಖಂಡರು ಭಾಗವಹಿಸಿದ್ದರು.
ಶಾಸಕ ವಿ.ಮುನಿಯಪ್ಪ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿ, ಕಾರ್ಯಕ್ರಮ ಶಿಸ್ತುಬದ್ಧವಾಗಿ, ಅದ್ದೂರಿಯಾಗಿ ಹಾಗೂ ಚೆನ್ನಾಗಿ ಮೂಡಿಬರಲು ತಾವು ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದರು. ತಾಲ್ಲೂಕಿನಾದ್ಯಂತ ಒಕ್ಕಲಿಗ ಜನರು ಒಗ್ಗೂಡಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಹೇಳಿದರು.
ಕೆಂಪೇಗೌಡರ ಜಯಂತ್ಯುತ್ಸವವನ್ನು ಕಳೆದ ಬಾರಿಯಂತೆ ಬೈಕ್ ರ್ಯಾಲಿ, ಪ್ರತಿ ಹಳ್ಳಿಯಿಂದಲೂ ಪಲ್ಲಕ್ಕಿಗಳ ಮೆರವಣಿಗೆ, ಕಲಾತಂಡಗಳನ್ನೊಳಗೊಂಡ ಮೆರವಣಿಗೆ ನಡೆಯಬೇಕು. ಎಸ್ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ, ಜನಾಂಗದ ಹಿರಿಯ ಸಾಧಕರಿಗೆ ಸನ್ಮಾನ, ಗಿಡಗಳನ್ನು ನೆಡುವುದು ಸಭೆಯಲ್ಲಿ ತೀರ್ಮಾನಿಸಲಾಯಿತು.
ಮುಖಂಡ ಮೇಲೂರು ರವಿಕುಮಾರ್, ಗೋಪಾಲ್, ಭಕ್ತರಹಳ್ಳಿ ಮುನೇಗೌಡ, ಎಸ್.ಎಂ.ನಾರಾಯಣಸ್ವಾಮಿ, ಜೆ.ಎಸ್.ವೆಂಕಟಸ್ವಾಮಿ, ನಾರಾಯಣಸ್ವಾಮಿ, ವೆಂಕಟರೆಡ್ಡಿ, ಚಂದ್ರೇಗೌಡ, ಎ.ಎಂ.ತ್ಯಾಗರಾಜ್, ತಾದೂರು ರಘು, ಮುರಳಿ, ಕೆಂಪರೆಡ್ಡಿ, ಚಂದ್ರಶೇಖರಗೌಡ, ಎಚ್.ಜಿ.ಗೋಪಾಲಗೌಡ, ಅಶ್ವತ್ಥನಾರಾಯಣರೆಡ್ಡಿ, ರಾಜಶೇಖರ್, ದೇವರಾಜ್, ಪ್ರಭಾಕರ್, ಹುಜಗೂರು ಬಚ್ಚೇಗೌಡ, ಮಂಜುನಾಥ್, ತಾದೂರು ಮಂಜುನಾಥ್, ಸುರೇಶ್, ಶ್ರೀರಾಮಯ್ಯ, ಲೋಕೇಶ್, ಶ್ರೀನಿವಾಸ್, ಭೀಮೇಶ್, ಕೃಷ್ಣಪ್ಪ ಹಾಜರಿದ್ದರು.
- Advertisement -
- Advertisement -
- Advertisement -
- Advertisement -