ಕೊರೊನಾ ಸೋಂಕು ಗ್ರಾಮೀಣ ಪ್ರದೇಶಗಳಿಗೆ ಹಬ್ಬಬಾರದು ಎನ್ನುವ ಉದ್ದೇಶದಿಂದ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗೆ ಬೇಲಿ ನಿರ್ಮಾಣ ಮಾಡುವ ಜೊತೆಗೆ ಜನತೆಗೆ ಕೊರೊನಾ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಅನುಸರಿಸಬೇಕಾದ ಮುನ್ನೆಚ್ಚರಿಕೆ ಬಗ್ಗೆ ಅರಿವು ಮೂಡಿಸುವ ಕೆಲಸಕ್ಕೆ ಯುವಕರು ಮುಂದಾಗಿದ್ದಾರೆ.
ತಾಲ್ಲೂಕಿನ ಹೊಸಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಪೇಟೆ, ಎದ್ದಲತಿಪ್ಪೇನಹಳ್ಳಿ ಗ್ರಾಮಗಳ ಯುವಕರು ತಮ್ಮ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಿಗೆ ಅಡ್ಡಲಾಗಿ ಬೇಲಿ ನಿರ್ಮಾಣ ಮಾಡಿ ಕೊರೊನಾ ಸೋಂಕಿತರು ಹಾಗೂ ರೋಗ ಹರಡುವ ಯಾರಿಗೂ ನಮ್ಮ ಗ್ರಾಮಗಳಿಗೆ ಪ್ರವೇಶವಿಲ್ಲ ಮತ್ತು ಕರೋನಾ ಗೋಬ್ಯಾಕ್ ಎಂಬ ಘೋಷಣೆಗಳನ್ನು ಕೂಗಿದರು.
ಈ ಸಂದರ್ಭದಲ್ಲಿ ಹೊಸಪೇಟೆ ಗ್ರಾಮ ಪಂಚಾಯಿತಿ ಸದಸ್ಯ ಮುನಿಆಂಜಿನಪ್ಪ ಮಾತನಾಡಿ, ವಿಶ್ವದಾದ್ಯಂತ ಮಹಾಮಾರಿಯಂತೆ ಆವರಿಸಿರುವ ಕರೋನಾ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಏಪ್ರಿಲ್ 14 ರವರೆಗೂ ವಿಧಿಸಿರುವ ಲಾಕ್ ಡೌನ್ ಸಂದರ್ಭದಲ್ಲಿ ಪ್ರತಿಯೊಬ್ಬರೂ ತಮ್ಮ ತಮ್ಮ ಮನೆಗಳಲ್ಲಿ ಉಳಿದುಕೊಳ್ಳುವ ಮೂಲಕ ಆರೋಗ್ಯವಂತ ಭಾರತದ ನಿರ್ಮಾಣಕ್ಕೆ ಕೈ ಜೋಡಿಸಬೇಕು. ಪ್ರತಿಯೊಬ್ಬರೂ ವೈಯಕ್ತಿಕ ಸ್ವಚ್ಚತೆ ಸೇರಿದಂತೆ ಮಾಸ್ಕ್ ಧರಿಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ಹೊಸಪೇಟೆ ಗ್ರಾಮದ ಯುವ ಮುಖಂಡರಾದ ಮುರಳಿ, ಚನ್ನಕೇಶವ, ಗಣೇಶ್, ಶಿವ, ಚನ್ನರಾಯ, ಚನ್ನಕೃಷ್ಣ ಪಾಲ್ಗೊಂಡಿದ್ದರು.
- Advertisement -
- Advertisement -
- Advertisement -