ತಾಲ್ಲೂಕಿನ ಸುಗಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಆರೋಗ್ಯ ಇಲಾಖೆ, ಸುಂದರಲಾಲ್ ಬಹುಗುಣ ಇಕೋಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ಕೊರೋನಾ ಸೋಂಕು ತಡೆ ಜಾಗೃತಿ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಶುಷ್ರೂಷಕಿ ಎನ್.ಆಶಾ ಮಾತನಾಡಿದರು.
ರೋಗಗಳು ಬಂದ ನಂತರ ಕಷ್ಟಪಡುವುದಕ್ಕಿಂತ ಬಾರದಂತೆಯೇ ತಡೆಯುವ ಕ್ರಮಗಳನ್ನು ಅನುಸರಿಸಬೇಕು. ಸುತ್ತಮುತ್ತಲೂ ಮತ್ತು ವೈಯಕ್ತಿಕ ನೈರ್ಮಲ್ಯದ ಸರಳ ಕ್ರಮಗಳನ್ನು ಅನುಸರಿಸುವ ರೋಗ ಹರಡುವುದನ್ನು ತಡೆಯಬಹುದು ಎಂದು ಅವರು ತಿಳಿಸಿದರು.
ಕೆಮ್ಮುವಾಗ, ಸೀನುವಾಗ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು. ಆಗಿಂದಾಗ್ಗೆ ಬಿಸಿನೀರಿನಿಂದ ಕೈಗಳನ್ನು ತೊಳೆದುಕೊಳ್ಳುವುದು, ಗಂಟಲನ್ನು ಉಪ್ಪು ಮತ್ತು ಬಿಸಿನೀರಿನಿಂದ ತೊಳೆಯಬೇಕು. ಅನಾರೋಗ್ಯ ಕಾಡಿದ ತಕ್ಷಣ ಆರೋಗ್ಯ ಇಲಾಖೆಯಿಂದ ಸಲಹೆ ಪಡೆಯಬೇಕು ಎಂದರು.
ಇಕೋಕ್ಲಬ್ನ ಕಾರ್ಯದರ್ಶಿ ಎಚ್.ಎಸ್.ರುದ್ರೇಶಮೂರ್ತಿ ಮಾತನಾಡಿ, ಜನಜಂಗುಳಿಯಿರುವ ಪ್ರದೇಶಗಳಲ್ಲಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವಾಗ ಎಚ್ಚರವಹಿಸಬೇಕು. ಮೂಗು, ಬಾಯಿ, ಗಂಟಲುಗಳನ್ನು ಅನೈರ್ಮಲ್ಯುತ ಕೈಯಿಂದ ಮುಟ್ಟದೇ ಸ್ವಚ್ಚವಾಗಿರಿಸಕೊಳ್ಳಬೇಕು. ಕಾಯಿಲೆಯ ಕುರಿತು ಭಯಪಡದೇ ಜಾಗ್ರತಾಕ್ರಮಗಳನ್ನು ಅನುಸರಿಸಬೇಕು ಎಂದರು.
ಈ ಸಂದರ್ಭದಲ್ಲಿ ಕೊರೋನಾ ಸೋಂಕುತಡೆ ಕುರಿತು ಕರಪತ್ರಗಳನ್ನು ಹಂಚಿ ಜಾಗೃತಿ ಮೂಡಿಸಲಾಯಿತು.
ಆರೋಗ್ಯಕಾರ್ಯಕರ್ತೆ ಭಾಗ್ಯಮ್ಮ, ಲಕ್ಷ್ಮಮ್ಮ, ತಿಮ್ಮಕ್ಕ, ಮುಖ್ಯಶಿಕ್ಷಕಿ ಉಮಾದೇವಿ, ಶಿಕ್ಷಕ ಬಿ.ನಾಗರಾಜು, ಲಕ್ಷ್ಮಯ್ಯ, ಎ.ಬಿ.ನಾಗರಾಜ, ಶಿಕ್ಷಕಿ ತಾಜೂನ್, ಎಸ್ಡಿಎಂಸಿ ಮಾಜಿ ಸದಸ್ಯ ಬಚ್ಚೇಗೌಡ ಹಾಜರಿದ್ದರು.
- Advertisement -
- Advertisement -
- Advertisement -