ನಂದಿನಿ ಹಾಲು ಹಾಗು ಹಾಲಿನ ಉತ್ಪನ್ನಗಳನ್ನು ಜನರು ಹೆಚ್ಚಾಗಿ ಬಳಸಿ ಆರೋಗ್ಯ ಕಾಪಾಡಿಕೊಳ್ಳುವುದರ ಜೊತೆಗೆ ಹಾಲು ಉತ್ಪಾದಕರು ಹಾಗೂ ಸಹಕಾರ ಸಂಘಗಳ ಉಳಿವಿಗಾಗಿ ಸಹಕರಿಸಬೇಕು ಎಂದು ಕೋಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ ತಿಳಿಸಿದರು.
ವಿಶ್ವ ಹಾಲು ದಿನಾಚರಣೆಯ ಪ್ರಯುಕ್ತ ಗುರುವಾರ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಉಚಿತವಾಗಿ ನಂದಿನಿ ಗುಡ್ಲೈಫ್ ಹಾಲನ್ನು ವಿತರಣೆ ಮಾಡಿ ಅವರು ಮಾತನಾಡಿದರು.
ಹಾಲು ವಿಶ್ವದಾದ್ಯಂತ ಎಲ್ಲರಿಗೂ ಬೇಕಾಗಿರುವ ವಸ್ತುವಾಗಿದೆ. ದೇಶದ ವಿವಿಧ ಭಾಗಗಳಲ್ಲಿ ಆಹಾರ ಪದ್ಧತಿಯಲ್ಲಿ ವ್ಯತ್ಯಾಸವಿದ್ದರೂ ಸಹ ಹಾಲು ಮಾತ್ರ ಒಂದೇ ಆಗಿರುತ್ತದೆ. ಪ್ರತಿಯೊಬ್ಬ ಮನುಷ್ಯ ದಿನವೊಂದಕ್ಕೆ ೫೦೦ ಮಿ.ಲೀ ಹಾಲು ಬಳಸಬೇಕು. ಆದರೆ ನಮ್ಮಲ್ಲಿ ಇಂದಿಗೂ ೬೦ ರಿಂದ -೭೦ ಮಿ.ಲೀ ಹಾಲು ಮಾತ್ರ ಬಳಕೆಯಾಗುತ್ತಿದೆ. ಉತ್ತಮ ಗುಣಮಟ್ಟದ ನಂದಿನಿ ಹಾಲನ್ನು ಎಲ್ಲರೂ ಬಳಸುವಂತಾಗಬೇಕು. ನಂದಿನಿ ಹಾಳಿನ ಖರೀದಿಯಿಂದ ಬರುವಂತಹ ಹಣವು ನೇರವಾಗಿ ಉತ್ಪಾದಕರಿಗೆ ತಲುಪುತ್ತದೆ ಹಾಗೂ ಸಹಕಾರ ಸಂಘಗಳೂ ಕೂಡಾ ಹೆಚ್ಚು ಬಲವರ್ಧನೆಯಾಗುತ್ತವೆ ಎಂದರು.
ನಂದಿನಿ ಹಾಲು ಒಕ್ಕೂಟದ ಉಪವ್ಯವಸ್ಥಾಪಕ ಹನುಮಂತರಾವ್, ಡಾ.ಉಮೇಶ್, ಆಸ್ಪತ್ರೆ ಸಿಬ್ಬಂದಿ ಹಾಜರಿದ್ದರು.
- Advertisement -
- Advertisement -
- Advertisement -