28.1 C
Sidlaghatta
Friday, February 13, 2026

ಕ್ರೀಡೆಯು ಬದುಕು ರೂಪಿಸುವ ಪ್ರಮುಖ ಮಾಧ್ಯಮ

- Advertisement -
- Advertisement -

ಕ್ರೀಡೆಯು ಬದುಕು ರೂಪಿಸುವ ಪ್ರಮುಖ ಮಾಧ್ಯಮ. ಕ್ರೀಡೆಯು ಆರೋಗ್ಯ, ಮಾನಸಿಕ ನೆಮ್ಮದಿ ಹಾಗೂ ದೈಹಿಕ ದೃಢತೆಯೊಂದಿಗೆ ಸಮಾಜದಲ್ಲಿ ಸಾಮರಸ್ಯವನ್ನು ಮೂಡಿಸಲು ಸಹಕಾರಿಯಾಗಬಲ್ಲುದು ಎಂದು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟು ಮಂಚನಬಲೆ ಶ್ರೀನಿವಾಸ್‌ ಅಭಿಪ್ರಾಯಪಟ್ಟರು.
ನಗರದ ಡಾಲ್ಫಿನ್‌ ವಿದ್ಯಾಸಂಸ್ಥೆಯಲ್ಲಿ ಭಾನುವಾರ ನಡೆದ ವಾರ್ಷಿಕ ಕ್ರೀಡಾ ಉತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕ್ರೀಡೆಯು ಮನುಷ್ಯನ ಮನೋಬಲ ಹೆಚ್ಚಿಸುತ್ತದೆ. ವಿದ್ಯಾರ್ಥಿಗಳು ದೈಹಿಕ, ಶಾರೀಕವಾಗಿ ಆರೋಗ್ಯವಾಗಿ ಇರಬೇಕಾದರೆ ಕ್ರೀಡೆಯು ಅತ್ಯಾವಶ್ಯ. ಆದ್ದರಿಂದ ವಿದ್ಯಾಥಿಗಳು ಕ್ರೀಡೆಯ ಮಹತ್ವದ ಕುರಿತು ಗಮನ ಹರಿಸಬೇಕಿದೆ. ಜನಸಂಖ್ಯೆಯಲ್ಲಿ ವಿಶ್ವದಲ್ಲಿಯೇ ಎರಡನೇ ಸ್ಥಾನದಲ್ಲಿದ್ದರೂ ಭಾರತ ಒಲಿಂಪಿಕ್ಸ್‌ ಪದಕ ಪಟ್ಟಿಯಲ್ಲಿ 67 ನೇ ಸ್ಥಾನ ಪಡೆದಿದೆ. ವಿಶ್ವದ ವೇಗದ ಓಟಗಾರ ಹುಸೇನ್‌ ಬೋಲ್ಟ್‌ ಇರುವ ಜಮೈಕ ಎನ್ನುವ ಪುಟ್ಟ ರಾಷ್ಟ್ರ ಪದಕ ಪಟ್ಟಿಯಲ್ಲಿ 16ನೇ ಸ್ಥಾನದಲ್ಲಿದೆ. ಭಾರತದಲ್ಲಿಯೂ ಅಗ್ರಮಾನ್ಯ ಕ್ರೀಡಾಪಟುಗಳಿದ್ದಾರೆ. ಅವರು ಇಂದಿನ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಬೇಕು. ಓದಿಗಷ್ಟೇ ಸೀಮಿತವಬಾಗಬಾರದು ಎಂದು ಹೇಳಿದರು.
ಒಲಿಂಪಿಕ್ಸ್‌ ಕ್ರೀಡೆ ಬೆಳೆದು ಬಂದ ಬಗೆ, ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಪದಕಗಳನ್ನು ತಂದುಕೊಟ್ಟ ಕ್ರೀಡಾಪಟುಗಳ ಬಗ್ಗೆ ವಿವರಿಸಿದರು.
ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ಡಾಲ್ಫಿನ್‌ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ಪಾರಿತೋಷಕ ಮತ್ತು ಪ್ರಮಾಣಪತ್ರವನ್ನು ವಿತರಿಸಲಾಯಿತು. ವಿದ್ಯಾರ್ಥಿಗಳು ವಿವಿಧ ಕ್ರೀಡಾ ಪ್ರದರ್ಶನಗಳನ್ನು ನೀಡಿದರು.
ಡಾಲ್ಫಿನ್‌ ವಿದ್ಯಾಸಂಸ್ಥೆಯ ಅಧ್ಯಕ್ಷ ಎ.ನಾಗರಾಜ್‌, ಕ್ರೀಡಾ ಇಲಾಖೆಯ ಉಪನಿರ್ದೇಶಕ ಟಿ.ಅಶ್ವತ್ಥರೆಡ್ಡಿ, ಸರ್ಕಲ್‌ ಇನ್ಸ್‌ಪೆಕ್ಟರ್‌ ಟಿ.ಸಿ.ವೆಂಕಟೇಶ್‌, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್‌.ರಘುನಾಥರೆಡ್ಡಿ, ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟು ಎಚ್‌.ಎನ್‌.ಆನಂದಕುಮಾರ್‌, ಡಾಲ್ಫಿನ್‌ ವಿದ್ಯಾಸಂಸ್ಥೆಯ ಕಾರ್ಯದರ್ಶಿ ವಿ.ಕೃಷ್ಣಪ್ಪ, ವ್ಯವಸ್ಥಾಪಕ ನಿರ್ದೇಶಕ ಅಶೋಕ್‌, ಚಂದನಾ ಮತ್ತಿತರರು ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!