Home News ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸನ್ಮಾನ

ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸನ್ಮಾನ

0

ನಗರದ ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ವರ್ಗಾವಣೆಗೊಂಡ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಬೀಳ್ಕೊಡುಗೆ ಹಾಗೂ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸ್ವಾಗತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಚಿಕ್ಕಬಳ್ಳಾಪುರದಲ್ಲಿ ಡಿ ವೈ ಪಿ ಸಿ ಆಗಿ ತಾಲ್ಲೂಕಿನಿಂದ ವರ್ಗಾವಣೆಗೊಂಡ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ರಘುನಾಥರೆಡ್ಡಿ ಮಾತನಾಡಿ, ತಾಲ್ಲೂಕಿನಲ್ಲಿ ಕಾರ್ಯನಿರ್ವಣೆಯ ಸಂದರ್ಭದ ಅನುಭವವನ್ನು ಮೆಲುಕು ಹಾಕಿದರು.
ಈ ಸಂದರ್ಭದಲ್ಲಿ ವರ್ಗಾವಣೆಗೊಂಡ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ರಘುನಾಥರೆಡ್ಡಿ ಹಾಗೂ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರಬಾಬು ಅವರನ್ನು ಸಿ ಆರ್ ಪಿ ಮತ್ತು ಬಿ ಆರ್ ಪಿ ಸಂಘದ ವತಿಯಿಂದ ಗೌರವಿಸಲಾಯಿತು.
ಸಿ ಆರ್ ಪಿ ಮತ್ತು ಬಿ ಆರ್ ಪಿ ಸಂಘದ ಅಧ್ಯಕ್ಷ ರಮೇಶ್ ಕುಮಾರ್, ಸಮನ್ವಯಾಧಿಕಾರಿ ರಾಜು, ಸಿ ಆರ್ ಪಿ ಗಳಾದ ಶ್ರೀನಿವಾಸರೆಡ್ಡಿ, ಪ್ರಸನ್ನಕುಮಾರ್, ಸುಂದರಾಚಾರಿ, ಮಂಜುನಾಥ, ವೆಂಕಟೇಶ್, ಚಂದ್ರಶೇಖರ್, ಶಾರದಮ್ಮ ಹಾಜರಿದ್ದರು.