27.1 C
Sidlaghatta
Tuesday, February 17, 2026

ಕ.ಸಾ.ಪ ಕಾರ್ಯಕ್ರಮಗಳಲ್ಲಿ ಎಲ್ಲರೂ ಭಾಗಿಯಾಗಿ

- Advertisement -
- Advertisement -

ಕನ್ನಡ ಸಾಹಿತ್ಯ ಪರಿಷತ್ತಿನ ಮೂಲಕ ತಾಲ್ಲೂಕಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಪ್ರತಿಯೊಬ್ಬರನ್ನೂ ತಲುಪುವ ಉದ್ದೇಶವನ್ನು ಹೊಂದಿರುವುದಾಗಿ ಕ.ಸಾ.ಪ ತಾಲ್ಲೂಕು ಅಧ್ಯಕ್ಷ ಬಿ.ಆರ್.ಅನಂತಕೃಷ್ಣ ತಿಳಿಸಿದರು.
ನಗರದ ತಾಲ್ಲೂಕು ಪಂಚಾಯತಿ ಕಛೇರಿಯಲ್ಲಿ ಗುರುವಾರ ತಾಲ್ಲೂಕು ಪಂಚಾಯತಿ ನೂತನ ಅಧ್ಯಕ್ಷ ಕೆ.ಲಕ್ಷ್ಮೀನಾರಾಯಣರೆಡ್ಡಿ ಮತ್ತು ಉಪಾಧ್ಯಕ್ಷ ಎಚ್.ನರಸಿಂಹಯ್ಯ ಅವರಿಗೆ ತಾಲ್ಲೂಕು ಕ.ಸಾ.ಪ ವತಿಯಿಂದ ಗೌರವ ಸಮರ್ಪಿಸಿ ಅವರು ಮಾತನಾಡಿದರು.
ಪಕ್ಷಬೇಧವಿಲ್ಲದೆ, ಜಾತಿಬೇಧವಿಲ್ಲದೆ ಪ್ರತಿಯೊಬ್ಬರನ್ನೂ ಕ.ಸಾ.ಪ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಬೇಕು. ಕನ್ನಡ ತಾಯಿಯ ಕೆಲಸ ಶ್ರೇಷ್ಠವಾದದ್ದು. ಈ ಕೆಲಸದಲ್ಲಿ ತೊಡಗಿಸಿಕೊಳ್ಳುವುದೇ ನಮ್ಮ ಭಾಗ್ಯ. ತಾಲ್ಲೂಕು ಪಂಚಾಯತಿ ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಕ.ಸಾ.ಪ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಸಹಕರಿಸಬೇಕು ಎಂದು ಕೋರಿದರು.
ಕ.ಸಾ.ಪ ತಾಲ್ಲೂಕು ಕಾರ್ಯದರ್ಶಿ ಎ.ಎಂ.ತ್ಯಾಗರಾಜ್, ಜಂಗಮಕೋಟೆ ಹೋಬಳಿ ಅಧ್ಯಕ್ಷ ಆರ್.ಎ.ಉಮೇಶ್, ರಾಮ್ಬಾಬು, ನರಸಿಂಹಮೂರ್ತಿ, ಶ್ರೀನಿವಾಸ್, ನಾರಾಯಣಸ್ವಾಮಿ,ದೇವರಾಜ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!