21.8 C
Sidlaghatta
Monday, February 23, 2026

ಕ.ಸಾ.ಪ ವತಿಯಿಂದ ಚಾಂದಿನಿಗೆ ಸನ್ಮಾನ

- Advertisement -
- Advertisement -

ಸಾಧಕರನ್ನು ಗೌರವಿಸುವ ಉದ್ದೇಶ ಅವರ ಸಾಧನೆ ಇತತರಿಗೆ ಪ್ರೇರಣೆಯಾಗಲಿ ಎಂಬುದಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಆರ್.ಅನಂತಕೃಷ್ಣ ತಿಳಿಸಿದರು.
ನಗರದ ಹಿರಿಯ ವಕೀಲ ಹಾಗೂ ನೋಟರಿ ಬಿ.ನೌಷಾದ್ ಅಲೀ ಮತ್ತು ನಿವೃತ್ತ ಎ.ಸಿ.ಡಿ.ಪಿ.ಒ ಎಸ್.ಕೆ.ತಾಜುನ್ನಿಸಾ ದಂಪತಿಯ ಪುತ್ರಿ ಎನ್.ಚಾಂದಿನಿ ಅವರು ಮಾಸ್ಟರ್ ಆಫ್ ಲಾ ನಲ್ಲಿ ಪ್ರಥಮ ರ್ಯಾಂಕ್ ಪಡೆದು ಚಿನ್ನದ ಪದಕ ಗಳಿಸಿರುವುದಕ್ಕೆ ಅವರನ್ನು ಶನಿವಾರ ಕ.ಸಾ.ಪ ವತಿಯಿಂದ ಗೌರವಿಸಿ ಅವರು ಮಾತನಾಡಿದರು.
ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಈ ರೀತಿಯ ಸಾಧಕರು ಇನ್ನಷ್ಟು ಮಂದಿ ಹೊರಬರಬೇಕು. ಈ ರೀತಿಯ ಸಾಧಕರ ಜ್ಞಾನ ನಮ್ಮ ತಾಲ್ಲೂಕಿಗೆ ಉಪಯುಕ್ತವಾಗಲಿ, ಪ್ರೇರಣಾದಾಯಕವಾಗಲಿ ಎಂದು ಹೇಳಿದರು.
ಕ.ಸಾ.ಪ ವತಿಯಿಂದ ಅಭಿನಂದನಾ ಪತ್ರ ಮತ್ತು ಪುಸ್ತಕವನ್ನು ನೀಡಿ ಎನ್.ಚಾಂದಿನಿ ಅವರಿಗೆ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಹೆಚ್ಚಿನ ವ್ಯಾಸಂಗ ಮತ್ತು ವಿದ್ಯಾರ್ಥಿ ವೇತನಗಳಿಗೆ ಸಂಬಂಧಿಸಿದ ವಿವಿಧ ವೆಬ್ಸೈಟ್ಗಳ ವಿವರವನ್ನು ನೀಡಲಾಯಿತು.
ತಾಲ್ಲೂಕು ಕ.ಸಾ.ಪ ಉಪಾಧ್ಯಕ್ಷ ಸಯ್ಯದ್ ತಮೀಮ್ ಅನ್ಸಾರಿ, ಖಜಾಂಚಿ ಸತೀಶ್, ಪತ್ರಿಕಾ ಪ್ರತಿನಿಧಿ ರಮೇಶ್, ವಕೀಲೆ ಬಿ.ನೌತಾಜ್ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!