ರಸ್ತೆ ದಾಟುತ್ತಿದ್ದ ಶಾಲಾ ಬಾಲಕನಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದ್ದು ಬಾಲಕ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ.
ತಾಲ್ಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ೧೧ನೇ ಮೈಲಿಗಲ್ಲು ಬಳಿ ಮಂಗಳವಾರ ನಡೆದ ಅಪಘಾತದಲ್ಲಿ ಗಂಜಿಗುಂಟೆಯ ವಿನಾಯಕ ಟ್ರಸ್ಟ್ ಶಾಲೆಯ ಹರೀಶ್(೭) ಸ್ಥಳದಲ್ಲೆ ಮೃತಪಟ್ಟ ದುರ್ದೈವಿ.
ಚಿಂತಾಮಣಿ ತಾಲ್ಲೂಕು ನಾಯನಹಳ್ಳಿಯ ಶಾಲೆಯ ೨ನೇ ತರಗತಿಯ ಈ ಬಾಲಕ ಶಾಲೆ ಮುಗಿಸಿಕೊಂಡು ಶಾಲಾ ವಾಹನದಲ್ಲಿ ೧೧ನೇ ಮೈಲಿಗಲ್ಲು ಕ್ರಾಸ್ನಲ್ಲಿ ಇಳಿದು ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ.
ದಿಬ್ಬೂರಹಳ್ಳಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಖಾಸಗಿ ಬಸ್ನ್ನು ವಶಕ್ಕೆ ಪಡೆದಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.