ನಗರದ ಕಾಮಾಟಿಗರ ಪೇಟೆಯಲ್ಲಿರುವ ಗ್ರಾಮದೇವತೆ ಶ್ರೀ ಗಂಗಮ್ಮ ದೇವಾಲಯದ ಸೇವಾ ಸಮಿತಿ ವತಿಯಿಂದ ಸೋಮವಾರ ರಾತ್ರಿ ಶ್ರೀ ದ್ರೌಪದಮ್ಮನವರ ಪ್ರಥಮ ವರ್ಷದ ಹೂವಿನ ಕರಗ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಕರಗದ ಪ್ರಯುಕ್ತ ನಗರದ ವಿಶೇಷ ವಾದ್ಯಗೋಷ್ಠಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಆಕರ್ಷಕ ತಮಟೆ ವಾದ್ಯ ಗಮನ ಸೆಳೆಯಿತು. ವೀರಕುಮಾರರು ಅಲಗು ಸೇವೆ ಮಾಡಿದರು. ಹಲಗೆ, ತಮಟೆ ವಾದ್ಯಗಳೊಂದಿಗೆ ಕರಗ ದೇವಾಲಯದ ಪ್ರದಕ್ಷಿಣೆ ಮಾಡಿ ನರ್ತಿಸಿತು. ಮುಂದೆ ಕತ್ತಿ ಹಿಡಿದ ವೀರಕುಮಾರರು, ಹಿಂದೆ ಕುಣಿಯುತ್ತಾ ಕರಗ ರಾತ್ರಿಯಿಡೀ ಊರೆಲ್ಲಾ ಸಂಚರಿಸಿತು. ಕರಗವನ್ನು ಮುಳಬಾಗಿಲು ನಾಗರಾಜು ಹೊತ್ತಿದ್ದರು. ಪ್ರತಿಯೊಬ್ಬರೂ ತಮ್ಮ ಮನೆಗಳ ಮುಂದೆ ರಂಗೋಲಿ ಹಾಕಿ ಅಲ್ಲಿಗೆ ಕರಗ ಬರುತ್ತಿದ್ದಂತೆ ಭಕ್ತಿಯಿಂದ ಆರತಿ ಬೆಳಗಿ ಮಲ್ಲಿಗೆ ಹೂಗಳನ್ನು ಸಮರ್ಪಿಸಿದರು. ಊರಿನ ಪ್ರಮುಖ ದೇವಾಲಯಗಳಲ್ಲಿ ವಿಶೇಷ ಪೂಜೆ, ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ಶನಿವಾರ ಒನಕೆ ಕರಗ ಮತ್ತು ಅಗ್ನಿಕುಂಡವನ್ನು ದೇವಸ್ಥಾನದ ಬಳಿ ನಡೆಸಲಾಯಿತು.
- Advertisement -
- Advertisement -
- Advertisement -