20.3 C
Sidlaghatta
Friday, July 18, 2025

ಗಣೇಶ ವಿಸರ್ಜನೆ

- Advertisement -
- Advertisement -

ಗಣೇಶ ಹಬ್ಬವನ್ನು ಶ್ರದ್ಧಾ, ಭಕ್ತಿಯಿಂದ ಆಚರಿಸಬೇಕು ಹಾಗೂ ರಾತ್ರಿಯಿಡೀ ಕುಣಿದು ಕುಪ್ಪಳಿಸಿ ಗಣೇಶ ವಿಸರ್ಜನೆ ಮೆರವಣಿಗೆ ನಡೆಸುವ ಕಾರ್ಯಕ್ಕೆ ಕಡಿವಾಣ ಹಾಕಿ ಹಗಲು ಹೊತ್ತಿನಲ್ಲಿ ವಿಸರ್ಜನೆ ಮೆರವಣಿಗೆ ನಡೆಸಬೇಕೆಂದು ಪೊಲೀಸರು ತಾಕೀತು ಮಾಡಿದ ಕಾರಣ ಭಾನುವಾರ ಸಂಜೆಯ ವೇಳೆಗೆ ಬಹುತೇಕ ಗಣೇಶ ವಿಸರ್ಜನೆಯನ್ನು ನಡೆಸಲಾಯಿತು.
ಸಾರ್ವಜನಿಕವಾಗಿ ಇಟ್ಟಿರುವ ಗಣೇಶ ಮೂರ್ತಿಗಳನ್ನು ವಿಸರ್ಜಿಸಲು ವೀರಾಪುರದಲ್ಲಿ ಕುಂಟೆಯನ್ನು ಪೊಲೀಸರು ನಿಗದಿಪಡಿಸಿದ್ದು, ಸುತ್ತ ಕಟಕಟೆಯನ್ನು ನಿರ್ಮಿಸಿದ್ದಾರೆ. ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಮೂರನೇ ದಿನ ಅಂದರೆ ಭಾನುವಾರ ಬಹುತೇಕರು ವಿಸರ್ಜಿಸಿದರು. ಸುಮಾರು 37 ಗಣೇಶ ಮೂರ್ತಿಗಳನ್ನು ಭಾನುವಾರ ಸಂಜೆ ವಿಸರ್ಜಿಸುವರೆಂದು ಪೊಲೀಸರು ತಿಳಿಸಿದ್ದಾರೆ.
ಮೆರವಣಿಗೆಯಲ್ಲಿ ಡೋಲು, ತಮ್ಮಟೆ ಸದ್ದಿನೊಂದಿಗೆ ಯುವಕರು ಕುಣಿದು ಕುಪ್ಪಳಿಸುತ್ತಾ ಸಾಗಿದರು. ಬಣ್ಣಗಳನ್ನು ಪರಸ್ಪರ ಹಾಕಿಕೊಂಡು ಹೋಳಿ ಹಬ್ಬವನ್ನು ನೆನಪಿಸಿದರು. ಕೆಲವರದ್ದು ವಾಲಗದೊಂದಿಗಿನ ಮಂಗಳಸ್ವರವಾದರೆ, ಕೆಲವರದ್ದು ಅಬ್ಬರದ ವಾದ್ಯಗಳು. ಅಲ್ಲಲ್ಲಿ ಪಟಾಕಿ ಸಿಡಿಸುತ್ತಾ, ಚಂದಾ ಎತ್ತುತ್ತಾ, ಚಲನಚಿತ್ರ ಗೀತೆಗಳಿಗೆ ನೃತ್ಯ ಮಾಡುತ್ತಾ, ಟ್ರಾಕ್ಟರ್ ಗಳಲ್ಲಿ ಗಣೇಶನ ಮೂರ್ತಿಗಳನ್ನಿಟ್ಟುಕೊಂಡು ಮೆರವಣಿಗೆಯಲ್ಲಿ ಸಾಗಿದರು.
ಇನ್ನೂ ನಗರದಲ್ಲಿ ಸುಮಾರು 20 ಗಣೇಶ ಮೂರ್ತಿಗಳನ್ನು ಇಟ್ಟಿದ್ದು ಶುಕ್ರವಾರ ಸಂಜೆ ಐದನೇ ದಿನ ವಿಸರ್ಜಿಸುವರೆಂದು ಪೊಲೀಸರು ತಿಳಿಸಿದ್ದಾರೆ.
 

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!