19.1 C
Sidlaghatta
Sunday, February 22, 2026

ಗಾಂಡ್ಲಚಿಂತೆ ಶಾಲೆಯಲ್ಲಿ ಭಾರತ ಸೇವಾದಳದ ಶಾಖೆ

- Advertisement -
- Advertisement -

ಶಿಸ್ತು, ಸಂಯಮ, ಭಾವೈಕ್ಯತೆಯನ್ನು ಮಕ್ಕಳಲ್ಲಿ ಬೆಳೆಸುವ ಉದ್ದೇಶದಿಂದ ಭಾರತ ಸೇವಾ ದಳದ ಶಾಖೆಯನ್ನು ಪ್ರಾರಂಭಿಸುತ್ತಿರುವುದಾಗಿ ಭಾರತ ಸೇವಾದಳ ತಾಲ್ಲೂಕು ಸಮಿತಿ ಉಪಾಧ್ಯಕ್ಷ ಎಸ್.ಎನ್.ಶ್ರೀನಿವಾಸಪ್ಪ ತಿಳಿಸಿದರು.
ತಾಲ್ಲೂಕಿನ ಗಾಂಡ್ಲಚಿಂತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರತ ಸೇವಾದಳದ ಶಾಖೆಯನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.
ಭಾರತ ಸೇವಾದಳ ಇತರ ಸಮಘ ಸಂಸ್ಥೆಗಳಿಗಿಂತ ವಿಭಿನ್ನವಾದುದು. ರಾಷ್ಟ್ರಧ್ವಜದ ಸಂಪೂರ್ಣ ಮಾಹಿತಿಯನ್ನು ನೀಡುತ್ತಾ ಮಕ್ಕಳಲ್ಲಿ ರಾಷ್ಟ್ರಪ್ರೇಮ ಮತ್ತು ಸೇವಾ ಮನೋಭಾವವನ್ನು ಬೆಳೆಸುತ್ತದೆ. ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಭಾರತ ಸೇವಾದಳದ ಕಾರ್ಯಕರ್ತರು ಸೇವೆಯಲ್ಲಿ ತೊಡಗಿಸಿಕೊಂಡು ಮಾನವೀಯ ಮೌಲ್ಯಗಳನ್ನು ಪ್ರದರ್ಶಿಸಿದ್ದಾರೆ ಎಂದು ಹೇಳಿದರು.
ಸ್ವಯಂಸೇವಕರಿಗೆ ಪ್ರತಿಜ್ಞಾವಿಧಿಯನ್ನು ಸೇವಾದಳ ವೆಂಕಟರೆಡ್ಡಿ ಹೇಳಿಕೊಟ್ಟರು. ಶಾಲಾ ವಿದ್ಯಾರ್ಥಿಗಳು ಪಥಸಂಚಲನೆ, ಏರೋಬಿಕ್ಸ್, ಪದಕವಾಯತ್ ಪ್ರದರ್ಶಿಸಿದರು.
ಸಿ.ಆರ್.ಪಿ.ಶಿವಣ್ಣ, ಸಿ.ಆರ್.ಪಿ. ಲಕ್ಷ್ಮಣರೆಡ್ಡಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದೇವರಾಜ, ಮುಖ್ಯಶಿಕ್ಷಕ ಮಂಜುನಾಥ, ಯಶಸ್ವಿನಿ, ಗೀತಾ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!