ಶಿಸ್ತು, ಸಂಯಮ, ಭಾವೈಕ್ಯತೆಯನ್ನು ಮಕ್ಕಳಲ್ಲಿ ಬೆಳೆಸುವ ಉದ್ದೇಶದಿಂದ ಭಾರತ ಸೇವಾ ದಳದ ಶಾಖೆಯನ್ನು ಪ್ರಾರಂಭಿಸುತ್ತಿರುವುದಾಗಿ ಭಾರತ ಸೇವಾದಳ ತಾಲ್ಲೂಕು ಸಮಿತಿ ಉಪಾಧ್ಯಕ್ಷ ಎಸ್.ಎನ್.ಶ್ರೀನಿವಾಸಪ್ಪ ತಿಳಿಸಿದರು.
ತಾಲ್ಲೂಕಿನ ಗಾಂಡ್ಲಚಿಂತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರತ ಸೇವಾದಳದ ಶಾಖೆಯನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.
ಸ್ವಯಂಸೇವಕರಿಗೆ ಪ್ರತಿಜ್ಞಾವಿಧಿಯನ್ನು ಸೇವಾದಳ ವೆಂಕಟರೆಡ್ಡಿ ಹೇಳಿಕೊಟ್ಟರು. ಶಾಲಾ ವಿದ್ಯಾರ್ಥಿಗಳು ಪಥಸಂಚಲನೆ, ಏರೋಬಿಕ್ಸ್, ಪದಕವಾಯತ್ ಪ್ರದರ್ಶಿಸಿದರು.
ಸಿ.ಆರ್.ಪಿ.ಶಿವಣ್ಣ, ಸಿ.ಆರ್.ಪಿ. ಲಕ್ಷ್ಮಣರೆಡ್ಡಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದೇವರಾಜ, ಮುಖ್ಯಶಿಕ್ಷಕ ಮಂಜುನಾಥ, ಯಶಸ್ವಿನಿ, ಗೀತಾ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.