20.6 C
Sidlaghatta
Tuesday, July 15, 2025

ಗಾಂಧಿಪೆಕ್ಸ್ 2020 ಭಿತ್ತಿಪತ್ರ ಬಿಡುಗಡೆ

- Advertisement -
- Advertisement -

ಕರ್ನಾಟಕ ಗ್ರಾಮಾಂತರ ಅಂಚೆಚೀಟಿ ಸಂಗ್ರಹಕಾರರ ಸಂಘದಿಂದ ಜನವರಿ 26-27 ರಂದು ನಡೆಯಲಿರುವ ಗಾಂಧಿಪೆಕ್ಸ್ 2020, ಅಂಚೆ ಚೀಟಿ ಪ್ರದರ್ಶನದ ಭಿತ್ತಿಪತ್ರವನ್ನು ಬಿಡುಗಡೆ ಮಾಡಿ ಚೀಫ್ ಪೋಸ್ಟ್ ಮಾಸ್ಟರ್ ಜನರಲ್ ಚಾರ್ಲ್ಸ್ ಲೋಬೋ ಮಾತನಾಡಿದರು.
ಮಹಾತ್ಮ ಗಾಂಧೀಜಿ ಎಂದರೆ ಇಡೀ ಜಗತ್ತಿಗೆ ಸನ್ಮಾರ್ಗ ತೋರಿದ ಬೆಳಕು ಎಂದು ಅವರು ತಿಳಿಸಿದರು.
ವಿಶ್ವ ಶಾಂತಿದೂತ, ಸತ್ಯಾನ್ವೇಷಕ ಮಹಾತ್ಮ ಗಾಂಧೀಜಿ ಅವರ 150 ನೇ ಹುಟ್ಟುಹಬ್ಬವನ್ನು ವಿಶ್ವದಾದ್ಯಂತ ವಿವಿಧ ರೀತಿಯಲ್ಲಿ ಆಚರಿಸಲಾಗುತ್ತಿದೆ. ಕರ್ನಾಟಕ ಗ್ರಾಮಾಂತರ ಅಂಚೆಚೀಟಿ ಸಂಗ್ರಹಕಾರರ ಸಂಘದಿಂದ ಶಿಡ್ಲಘಟ್ಟದ ಅರಳೇಪೇಟೆಯ ಬಸವೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿ 2222 ನೇ ವಿಶ್ವ ಗ್ರಾಮಾಂತರ ಅಂಚೆಚೀಟಿ ಪ್ರದರ್ಶನವನ್ನು ಏರ್ಪಡಿಸಿದೆ. ವಿಶ್ವದ ನೂರಾರು ದೇಶಗಳು ಹೊರತಂದಿರುವ ಮಹಾತ್ಮ ಗಾಂಧೀಜಿ ಅವರ ಅಂಚೆ ಚೀಟಿಗಳನ್ನು ಪ್ರದರ್ಶಿಸಲಾಗುತ್ತದೆ.
1936 ರ ಮೇ 31 ರಂದು ಮಹಾತ್ಮ ಗಾಂಧೀಜಿ ಶಿಡ್ಲಘಟ್ಟಕ್ಕೆ ಭೇಟಿ ನೀಡಿದ್ದರ ಸವಿನೆನಪಿನಲ್ಲಿ ವಿಶೇಷ ಅಂಚೆ ಲಕೋಟೆಯನ್ನು ಸಹ ಈ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಾಗುತ್ತದೆ. ಮಹಾತ್ಮ ಗಾಂಧೀಜಿ ಅವರ ಸತ್ಯ, ನಿಷ್ಠೆ, ಪ್ರಾಮಾಣಿಕತೆ, ಅಹಿಂಸಾ ತತ್ವ ಎಲ್ಲೆಡೆ ಸಾರಬೇಕು‌ ಎಂಬ ಉದ್ದೇಶದಿಂದ ಪ್ರದರ್ಶನಕ್ಕೆ ಸಿದ್ಧತೆ ನಡೆದಿದೆ ಎಂದು ವಿವರಿಸಿದರು.
ಕರ್ನಾಟಕ ಗ್ರಾಮಾಂತರ ಅಂಚೆಚೀಟಿ ಸಂಗ್ರಹಕಾರರ ಸಂಘದ ಅಧ್ಯಕ್ಷ ಮೇಲೂರು ಎಂ.ಆರ್.ಪ್ರಭಾಕರ್ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!