ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಭಾನುವಾರ ಎಸ್.ಎನ್.ಕ್ರಿಯಾ ಟ್ರಸ್ಟ್, ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ನಡೆಸಿದ ರಕ್ತದಾನ ಶಿಬಿರದಲ್ಲಿ 300 ಯೂನಿಟ್ ಸಂಗ್ರಹವಾಗಿ ಜಿಲ್ಲೆಯಲ್ಲೇ ದಾಖಲೆಯನ್ನು ನಿರ್ಮಿಸಿದೆ.
‘ರೆಡ್ಕ್ರಾಸ್ ಸಹಯೋಗದಲ್ಲಿ ನಡೆಯುತ್ತಿರುವ ರಕ್ತದಾನ ಶಿಬಿರಗಳಲ್ಲಿ ಈ ವರ್ಷದ ಅತಿ ಹೆಚ್ಚು ಯೂನಿಟ್ ರಕ್ತ ಸಂಗ್ರಹ ಮಾಡುವ ಮೂಲಕ ತಾಲ್ಲೂಕಿನ ದಾಖಲೆಯನ್ನು ನಿಮರ್ಮಿಸಿರುವುದು ಹೆಮ್ಮೆಯ ಸಂಗತಿ. ಗಾಂಧಿ ಜಯಂತಿಯ ಪವಿತ್ರವಾದ ದಿನದಂದು ಮಾಡಿದ ಈ ಉತ್ತಮ ಕಾರ್ಯಕ್ಕೆ ಸಾರ್ವಜನಿಕರ ಸ್ಪಂದನೆ ಅದ್ಭುತವಾಗಿತ್ತು. ರಕ್ತದಾನವನ್ನು ಸ್ವಯಂಪ್ರೇರಿತರಾಗಿ ಬಂದು ಮಾಡಿ ನೂರಾರು ಜನರ ಪ್ರಾಣ ಉಳಿಸುವಲ್ಲಿ ಇಂದು ನೆರವಾಗಿದ್ದಾರೆ’ ಎಂದು ಎಸ್.ಎನ್.ಕ್ರಿಯಾ ಟ್ರಸ್ಟ್ ಅಧ್ಯಕ್ಷ ಆಂಜಿನಪ್ಪ ತಿಳಿಸಿದರು.
ಪೀಪಲ್ ಟ್ರೀ ಹಾಸ್ಪಟಲ್ ಸಹಯೋಗದಲ್ಲಿ ಉಚಿತ ಕಣ್ಣಿ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರವನ್ನು ಈ ಸಂದರ್ಭದಲ್ಲಿ ಆಯೋಜಿಸಲಾಗಿತ್ತು. ನೂರಾರು ಮಂದಿ ಸಾರ್ವಜನಿಕರು ಕಣ್ಣಿನ ತಪಾಸಣೆಯನ್ನು ಮಾಡಿಸಿಕೊಂಡರು. ಉಚಿತವಾಗಿ ಕನ್ನಡಕವನ್ನು ಎಸ್.ಎನ್.ಕ್ರಿಯಾ ಟ್ರಸ್ಟ್ ವತಿಯಿಂದ ನೀಡಲಾಯಿತು. ಕಣ್ಣಿನ ಶಸ್ತ್ರ ಚಿಕಿತ್ಸೆಯ ಅಗತ್ಯವುಳ್ಳವರನ್ನು ಉಚಿತವಾಗಿ ಪೀಪಲ್ ಟ್ರೀ ಹಾಸ್ಪಟಲ್ ಕರೆದೊಯ್ದು ಶಸ್ತ್ರಚಿಕಿತ್ಸೆ ಮಾಡಿಸಲಾಯಿತು. ರಕ್ತದಾನಿಗಳಿಗೆ ಹಣ್ಣು, ಪ್ರಶಂಸನಾ ಪತ್ರದೊಂದಿಗೆ ಸಸಿಗಳನ್ನು ವಿತರಿಸಲಾಯಿತು.
ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಜಿಲ್ಲಾ ಅಧ್ಯಕ್ಷರಾದ ಜಿಲ್ಲಾಧಿಕಾರಿ ದೀಪ್ತಿ ಆದಿತ್ಯ ಕಾನಡೆ ಅವರ ಪರವಾಗಿ ತಾಲ್ಲೂಕು ಕಾರ್ಯದರ್ಶಿ ಎನ್.ಕೆ.ಗುರುರಾಜರಾವ್ ಅಭಿನಂದನೆಯನ್ನು ಸಲ್ಲಿಸಿ, ‘2016–17ನೇ ಸಾಲಿನಲ್ಲಿ ನಡೆದಿರುವ ರಕ್ತದಾನ ಶಿಬಿರಗಳಲ್ಲಿ ಈ ದಿನ ಎಸ್.ಎನ್.ಕ್ರಿಯಾ ಟ್ರಸ್ಟ್ ವತಿಯಿಂದ ನಡೆದ ಶಿಬಿರದಲ್ಲಿ ಅತಿ ಹೆಚ್ಚಿನ ಯೂನಿಟ್ ರಕ್ತ ಸಂಗ್ರಹಣೆಯಾಗಿದೆ’ ಎಂದು ತಿಳಿಸಿದರು.
ಸುಂದರೇಶ್, ಎ.ಆರ್.ಅಬ್ದುಲ್ ಅಜೀಜ್, ಮುನಿರಾಜು, ಮೌಲಾ, ಶಕೀಲ್ ಅಹ್ಮದ್, ಅಪ್ಪು, ಆನೂರು ಶ್ರೀನಿವಾಸ್, ಮಂಜುನಾಥ್, ಮುರಳಿ, ನಟರಾಜ್, ಶ್ರೀನಿವಾಸ್, ನವೀನ್, ಮಹಬೂಬ್, ಜಬೀ, ಮಹಮ್ಮದ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -