16.1 C
Sidlaghatta
Monday, December 8, 2025

ಗಾಂಧಿ ಜಯಂತಿ ಹಾಗು ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಹಾಗು ರಕ್ತದಾನ ಶಿಬಿರ

- Advertisement -
- Advertisement -

ಗಾಂಧಿ ಜಯಂತಿ ಹಾಗು ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ಅ ೦೫ ರ ಗುರುವಾರ ನಗರದ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗು ರಕ್ತದಾನ ಶಿಬಿರ ಆಯೋಜಿಸಿದ್ದು ಸಾರ್ವಜನಿಕರು ಇದರ ಸದುಪಯೋಗ ಮಾಡಿಕೊಳ್ಳುವಂತೆ ಎಸ್.ಎನ್.ಕ್ರಿಯಾ ಟ್ರಸ್ಟ್ ಅಧ್ಯಕ್ಷ ಆಂಜಿನಪ್ಪ ತಿಳಿಸಿದರು.
ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಹೊಸಕೋಟೆಯ ಎಂ.ವಿ.ಜೆ ಆಸ್ಪತ್ರೆ ಹಾಗು ರೆಡ್ಕ್ರಾಸ್ ಸಂಸ್ಥೆಯ ಸಹಯೋಗದೊಂದಿಗೆ ಎಸ್.ಎನ್.ಕ್ರಿಯಾ ಟ್ರಸ್ಟ್ ಉಚಿತ ಆರೋಗ್ಯ ತಪಾಸಣಾ ಹಾಗು ರಕ್ತದಾನ ಶಿಬಿರವನ್ನು ನಡೆಸುತ್ತಿದೆ.
ಹಲವಾರು ಮಂದಿ ತಜ್ಞ ವೈದ್ಯರು ಆಗಮಿಸುತ್ತಿದ್ದಾರೆ. ಮಧುಮೇಹ, ರಕ್ತದೊತ್ತಡ, ಕಣ್ಣು, ಮೂಳೆ, ಮಕ್ಕಳ ತಜ್ಞರು ಹಾಗೂ ಸ್ತ್ರೀ ರೋಗ ತಜ್ಞರು ಹಾಜರಿರುತ್ತಾರೆ. ಈ ಸಂದರ್ಭದಲ್ಲಿ ಟ್ರಸ್ಟ್ ವತಿಯಿಂದ ಔಷಧಿಗಳನ್ನು ಉಚಿತವಾಗಿ ನೀಡಲಿದ್ದೇವೆ. ಯಶಸ್ವಿನಿ ಮತ್ತು ಆರ್ ಎಸ್ ಬಿ ವೈ ಕಾರ್ಡ್ ಹೊಂದಿರುವವರಿಗೆ ಉಚಿತವಾಗಿ ಶಸ್ತ್ರಚಿಕಿತ್ಸೆಯನ್ನು ಹೊಸಕೋಟೆಯ ಎಂ.ವಿ.ಜೆ ಆಸ್ಪತ್ರೆಯಲ್ಲಿ ನಡೆಸಲಾಗುತ್ತದೆ. ಯಶಸ್ವಿನಿ ಮತ್ತು ಆರ್ಎಸ್ಬಿವೈ ಕಾರ್ಡ್ ಹೊಂದಿಲ್ಲದ ಬಡವರಿಗೆ ಎಸ್.ಎನ್.ಕ್ರಿಯಾ ಟ್ರಸ್ಟ್ ವತಿಯಿಂದ ಶಸ್ತ್ರಚಿಕಿತ್ಸೆಗೆ ನೆರವು ನೀಡಲಾಗುವುದು ಎಂದು ಹೇಳಿದರು.
ಹೆಚ್ಚಿನ ಚಿಕಿತ್ಸೆ ಅಗತ್ಯವಿರುವವರಿಗೆ ಹೊಸಕೋಟೆಯ ಎಂ.ವಿ.ಜೆ ಆಸ್ಪತ್ರೆಯಲ್ಲಿ ಉಚಿತವಾಗಿ ಶಸ್ತ್ರಚಿಕಿತ್ಸೆಯನ್ನು ಮಾಡಲಾಗುವುದು. ತಜ್ಞ ವೈದ್ಯರ ಇಡೀ ತಂಡವೇ ಶಿಬಿರದಲ್ಲಿ ಪಾಲ್ಗೊಳ್ಳುವುದರಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಆರೋಗ್ಯ ಪರೀಕ್ಷೆಯನ್ನು ಮಾಡಿಸಿಕೊಳ್ಳುವಂತೆ ಕೋರಿದರು.
ಎಸ್.ಎನ್.ಕ್ರಿಯಾ ಟ್ರಸ್ಟ್ನ ಆನೂರು ದೇವರಾಜ್, ಮುಖಂಡರಾದ ಹೆಚ್.ಎಂ.ಕೃಷ್ಣಪ್ಪ, ರೆಡ್ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಎನ್.ಕೆ.ಗುರುರಾಜರಾವ್, ಅಪ್ಸರ್ಪಾಷ, ವಿಶ್ವನಾಥ ಈ ಸಂದರ್ಭದಲ್ಲಿ ಹಾಜರಿದ್ದರು.
 

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!