26.1 C
Sidlaghatta
Thursday, September 21, 2023

ಗಾಂಧಿ ಜಯಂತಿ ಹಾಗೂ ಲಾಲ್ ಬಹೂದ್ಧೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮ

- Advertisement -
- Advertisement -

ಮಹಾತ್ಮಗಾಂಧಿಜಿ ಅವರ ಆದರ್ಶಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಂಡಾಗ ಮಾತ್ರವೇ ಭ್ರಷ್ಟಾಚಾರ ರಹಿತ ಸಮಾಜದ ನಿರ್ಮಾಣ ಸಾಧ್ಯವಾಗುತ್ತದೆ ಎಂದು ತಹಶೀಲ್ದಾರ್ ಎಸ್.ಅಜಿತ್ ಕುಮಾರ್ ರೈ ಹೇಳಿದರು.
ನಗರದ ತಾಲ್ಲೂಕು ಕಚೇರಿಯಲ್ಲಿ ಆಯೋಜಿಸಿದ್ದ ೧೪೮ ಗಾಂಧಿ ಜಯಂತಿ ಹಾಗೂ ಲಾಲ್ ಬಹೂದ್ಧೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗಾಂಧಿ ಅವರು ಕಂಡ ಕನಸಿನಂತೆ ಭ್ರಷ್ಟಾಚಾರ ಮುಕ್ತ, ಹಸಿವು ಮುಕ್ತ, ಆರೋಗ್ಯವಂತ ಸಮಾಜದ ಪರಿಕಲ್ಪನೆ ನಮ್ಮದಾಗಬೇಕು. ಆರೋಗ್ಯವಂತ ಸಮಾಜದ ನಿರ್ಮಾಣದಲ್ಲಿ ಯುವಜನರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಹಳ್ಳಿಗಳು ಅಭಿವೃದ್ಧಿಯಾಗಬೇಕು. ಜನರು ಸರ್ಕಾರದ ಯೋಜನೆಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದರು.
ತಾಲ್ಲೂಕು ಕಚೇರಿಯ ಅಧಿಕಾರಿಗಳು ಗಾಂಧಿಜೀ, ಲಾಲ್ ಬಹೂದ್ಧೂರ್ ಶಾಸ್ತ್ರೀ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿದರು.
ಶಿರಸ್ತೆದಾರ್ ಲಕ್ಷ್ಮೀಕಾಂತಮ್ಮ, ರಾಜಸ್ವ ನಿರೀಕ್ಷಕರಾದ ಕೃಷ್ಣಾರೆಡ್ಡಿ, ಮೋಹನ್, ಸಿಬ್ಬಂದಿ ನಾಗರಾಜು, ನಾರಾಯಣಸ್ವಾಮಿ, ಮನೋಹರ್, ಮಾರಪ್ಪ, ಮುಂತಾದವರು ಹಾಜರಿದ್ದರು.
 

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!