ಗಾಂಧಿ-೧೫೦ ಸ್ಮರಣಾರ್ಥ ಸ್ವಚ್ಚತಾ ಅಭಿಯಾನ

- Advertisement -
- Advertisement -

ಸುಗಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳುರು ಗ್ರಾಮಾಂತರ ಜಿಲ್ಲಾ ನೆಹರು ಯುವ ಕೇಂದ್ರದ ವತಿಯಿಂದ ಆಯೋಜಿಸಿದ್ದ ಉಚಿತ ಬೈಸಿಕಲ್ ವಿತರಣೆ, ಗಾಂಧಿ-೧೫೦ ಸ್ಮರಣಾರ್ಥ ಸ್ವಚ್ಚತಾ ಅಭಿಯಾನದಲ್ಲಿ ಪಾಲ್ಗೊಂಡವರಿಗೆ ಪುರಸ್ಕಾರ, ಪ್ರತಿಭಾದಿನಾಚರಣೆ, ಡ್ರಾಯಿಂಗ್ ಗ್ರೇಡ್ ಪರೀಕ್ಷಾ ಉತ್ತೀರ್ಣರಾದವರಿಗೆ ಸರ್ಟಿಫಿಕೇಟ್ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜಂಗಮಕೋಟೆ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಬೈರಾರೆಡ್ಡಿ ಮಾತನಾಡಿದರು.
ಗ್ರಾಮೀಣ ಭಾಗದ ಮಕ್ಕಳು ಇಂದಿನ ಸ್ಪರ್ಧಾಯುಗದಲ್ಲಿ ನಗರಪ್ರದೇಶದಲ್ಲಿ ಕಲಿತ ಮಕ್ಕಳೊಂದಿಗೆ ಉನ್ನತಶಿಕ್ಷಣ, ಉದ್ಯೋಗಗಳಿಗಾಗಿ ಎದುರಿಸುವುದು ಕಷ್ಟಕರವಾಗಿದೆ. ಮಕ್ಕಳು ಕಲಿಕೆಯಲ್ಲಿ ಶಿಸ್ತು ಮೂಡಿಸಿಕೊಂಡು ಆತ್ಮವಿಶ್ವಾಸದಿಂದ ವ್ಯಾಸಂಗ ಮಾಡಬೇಕು ಎಂದು ಅವರು ತಿಳಿಸಿದರು.
ಮಕ್ಕಳಲ್ಲಿ ಸಮಯಪ್ರಜ್ಞೆ ಇರಬೇಕು. ಉತ್ತಮ ಗುರಿಯನ್ನು ಇಟ್ಟುಕೊಂಡು ಗುರುಗಳ ಮಾರ್ಗದರ್ಶನದಲ್ಲಿ ಶ್ರದ್ಧೆ ಮತ್ತು ನಿಷ್ಟೆಯಿಂದ ಕಲಿಯಬೇಕು. ಆಗ ಮಾತ್ರ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾದ್ಯವಿದೆ ಎಂದರು.
ಶಿಕ್ಷಕ ಎಚ್.ಎಸ್.ರುದ್ರೇಶಮೂರ್ತಿ ಮಾತನಾಡಿ, ಮಕ್ಕಳಲ್ಲಿ ಅಧ್ಯಯನಾಸಕ್ತಿ ಕ್ಷೀಣಿಸುತ್ತಿದೆ. ಮೌಲ್ಯಗಳು ಕುಸಿಯುತ್ತಿದ್ದು, ಪಠ್ಯದ ಜೊತೆಗೆ ಉತ್ತಮ ಮೌಲ್ಯಗಳನ್ನು ಬೆಳೆಸಬಲ್ಲ ಪುಸ್ತಕಗಳ ಅಧ್ಯಯನದಲ್ಲಿ ತೊಡಗಿಸಿಕೊಳ್ಳಬೇಕು. ಮಕ್ಕಳು ಗುರು ಹಿರಿಯರಲ್ಲಿ ಗೌರವಾದರಗಳನ್ನು ತೋರುವ ಗುಣ ಬೆಳೆಸಿಕೊಳ್ಳಬೇಕು. ಪೋಷಕರೂ ಮಕ್ಕಳ ಕಲಿಕೆಯ ಕಡೆ ಹೆಚ್ಚು ಗಮನಹರಿಸಬೇಕು ಎಂದರು.
ಜಿಲ್ಲಾ ನೆಹರೂ ಯುವಕೇಂದ್ರದ ರಾಜ್ಯ ಸಂಯೋಜಕ ವಿ.ಪ್ರಶಾಂತ್ ಮಾತನಾಡಿ, ಪ್ರತಿಯೊಂದು ಮಗುವಿನಲ್ಲಿಯೂ ಆಜನ್ಮದತ್ತವಾಗಿ ಯಾವುದಾದರೊಂದು ಪ್ರತಿಭೆ ಸುಪ್ತವಾಗಿ ಅಡಕವಾಗಿರುತ್ತದೆ. ಪ್ರತಿಭೆಯಿದ್ದವರು ಎಲ್ಲಿಯಾದರೂ ಬದುಕಲು ಸುಲಭಸಾಧ್ಯವಾಗುವುದು ಎಂದರು.
೮ ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್‌ಗಳು, ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾಮಂಡಳಿಯು ಡ್ರಾಯಿಂಗ್ ಗ್ರೇಡ್ ಲೋಯರ್ ಮತ್ತು ಹೈಯರ್ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಪ್ರಮಾಣಪತ್ರಗಳನ್ನು, ಗಾಂಧಿ ಸಂಸ್ಕಾರ ಪರೀಕ್ಷಾ ಸ್ಪರ್ಧಿಗಳಿಗೆ ಪ್ರಶಸ್ತಿಪತ್ರಗಳನ್ನು ವಿತರಿಸಲಾಯಿತು, ಶಾಲಾಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಎಸ್‌ಡಿಎಂಸಿ ಅಧ್ಯಕ್ಷ ಎಸ್.ಎಂ.ಶಂಕರಪ್ಪ ಮಾತನಾಡಿದರು. ಗ್ರಾಮಪಂಚಾಯಿತಿ ಸದಸ್ಯ ಎನ್.ಅಶ್ವತ್ಥಪ್ಪ, ಷಣ್ಮುಗಪ್ಪ, ಸದಸ್ಯೆ ಭಾಗ್ಯಮ್ಮ ಅರುಣ್‌ಕುಮಾರ್, ಎಸ್.ಟಿ.ಬಚ್ಚೇಗೌಡ, ಮುನಿಕೃಷ್ಣಪ್ಪ, ಮುಖ್ಯಶಿಕ್ಷಕಿ ಉಮಾದೇವಿ, ಶಿಕ್ಷಕ ಎ.ಬಿ.ನಾಗರಾಜ, ಬಿ.ನಾಗರಾಜು, ಲಕ್ಷ್ಮಯ್ಯ, ಶಿಕ್ಷಕಿ ತಾಜೂನ್, ಅನಿತಾ, ಗ್ರಾಮಸ್ಥರು ಹಾಜರಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!