ಚಿನ್ನದ ಮೇಲೆ ವಿಧಿಸಿರುವ ಹೆಚ್ಚುವರಿ ತೆರಿಗೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ತಾಲ್ಲೂಕಿನ ಗಿರವಿ ಮತ್ತು ಚಿನ್ನ ಬೆಳ್ಳಿ ವರ್ತಕರು ತಹಶೀಲ್ದಾರ್ ಮನೋರಮಾ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.
ಗಿರವಿ ಮತ್ತು ಚಿನ್ನ ಬೆಳ್ಳಿ ವರ್ತಕರ ಸಂಘದ ತಾಲ್ಲೂಕು ಅಧ್ಯಕ್ಷ ಕಾಶಿನಾಥ ಮಾತನಾಡಿ, ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ನಲ್ಲಿ ಆಮದು ಸುಂಕ ಹೆಚ್ಚಿಸಿ ಚಿನ್ನವನ್ನು ಸೇವಾ ತೆರಿಗೆ ವ್ಯಾಪ್ತಿಗೆ ಒಳಪಡಿಸಿರುವ ಕಾರಣ ವರ್ತಕರಿಗೆ ಹಾಗೂ ಗ್ರಾಹಕರಿಗೆ ಹೊರೆಯಾಗಿದೆ. ಸರ್ಕಾರ ತೆರಿಗೆ ಹೆಚ್ಚಿಸಿದರೆ ಅದನ್ನು ಗ್ರಾಹಕರೇ ಭರಿಸಬೇಕಾಗುತ್ತದೆ. ಆದ್ದರಿಂದ ಜನರ ಹಿತದೃಷ್ಟಿಯಿಂದ ಕೂಡಲೇ ಎಲ್ಲ ರೀತಿಯ ತೆರಿಗೆ ಮತ್ತು ಸುಂಕ ಕಡಿತಗೊಳಿಸಲು ಕೇಂದ್ರ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರಧಾನ ಮಂತ್ರಿಗಳಿಗೆ ರವಾನಿಸಲು ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ಸಂಘದ ಪದಾಧಿಕಾರಿಗಳಾದ ದೇವಾರಾಮ್, ವಿ.ಎ.ಕಾಶಿನಾಥ್, ಮುನಿರತ್ನಾಚಾರ್ ಮತ್ತಿತರರು ಈ ಸಂದರ್ಭದಲ್ಲಿ ಹಾಜದ್ದರು.