ಗುಡಿಹಳ್ಳಿಯಲ್ಲಿ ಶ್ರೀ ಪಾರ್ವತಾಂಬ ಸಮೇತ ಶ್ರೀ ಸೋಮೇಶ್ವರಸ್ವಾಮಿ ಬ್ರಹ್ಮರಥೋತ್ಸವ

- Advertisement -
- Advertisement -

ತಾಲ್ಲೂಕಿನ ಗುಡಿಹಳ್ಳಿಯ ಶ್ರೀಪಾರ್ವತಾಂಬ ಸಮೇತ ಶ್ರೀಸೋಮೇಶ್ವರಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವವನ್ನು ಮಂಗಳವಾರ ಶ್ರದ್ಧಾ ಭಕ್ತಿಯಿಂದ ನೆರವೇರಿಸಲಾಯಿತು. ಸುತ್ತ ಮುತ್ತಲ ಗ್ರಾಮಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರು ಬ್ರಹ್ಮರಥೋತ್ಸವಕ್ಕೆ ಸಾಕ್ಷಿಯಾದರು.
ತಾಲ್ಲೂಕಿನ ಅಬ್ಲೂಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡಿಹಳ್ಳಿ ಗ್ರಾಮದ ಶ್ರೀಪಾರ್ವತಾಂಬ ಸಮೇತ ಶ್ರೀಸೋಮೇಶ್ವರಸ್ವಾಮಿ ದೇವಾಲಯದ ೧೧ ನೇ ವರ್ಷದ ಬ್ರಹ್ಮ ರಥೋತ್ಸವದ ಅಂಗವಾಗಿ ದೇವರಿಗೆ ವಿಶೇಷ ಹೂವಿನ ಅಲಂಕಾರ ಮಾಡಿ ಸಿಂಗರಿಸಲಾಗಿತ್ತು. ವಿಶೇಷ ಪೂಜೆ, ಹೋಮ, ಹವನ, ಕಳಶ ಪೂಜೆ, ಗಣಪತಿ ಪೂಜೆ ನಡೆಸಿ ಮಹಾ ಮಂಗಳಾರತಿ ನೆರವೇರಿಸಿ ತೀರ್ಥ ಪ್ರಸಾದವನ್ನು ವಿನಿಯೋಗಿಸಲಾಯಿತು.
ಉತ್ಸವ ಮೂರ್ತಿಯನ್ನು ಅಲಂಕೃತ ಹೂವಿನ ತೇರಿನಲ್ಲಿ ಪ್ರತಿಷ್ಠಾಪಿಸಿ ಊರ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯನ್ನು ಮಾಡಲಾಯಿತು. ಕರಡಿ ವೇಷ, ಗಾರುಡಿ ಗೊಂಬೆ, ತಮಟೆ, ನಾದಸ್ವರ, ವೀರಗಾಸೆ ಇನ್ನಿತರೆ ಜನಪದ ಕಲಾತಂಡಗಳು ರಥೋತ್ಸವಕ್ಕೆ ಕಳೆ ತಂದಿದ್ದವು.
ರಥೋತ್ಸವಕ್ಕೆ ರಾಜಸ್ವ ನಿರೀಕ್ಷಕ ವಿಶ್ವನಾಥ್ ಚಾಲನೆ ನೀಡಿದರು.
ಮುಖಂಡರಾದ ಚನ್ನಕೃಷ್ಣಪ್ಪ, ಮುನಿವೆಂಕಟಸ್ವಾಮಿ, ಶ್ರೀರಾಮಪ್ಪ, ಬಚ್ಚರಾಯಪ್ಪ, ದ್ಯಾವಪ್ಪ, ನರಸಿಂಹಮೂರ್ತಿ, ದೇವರಾಜ್, ಚಂದ್ರು, ಜೆ.ಎಸ್.ವೆಂಕಟಸ್ವಾಮಿ, ಎಸ್.ಎಂ.ರವಿಪ್ರಕಾಶ್ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!