ಗುಡಿಹಳ್ಳಿಯ ಪಾರ್ವತಾಂಬ ಸಮೇತ ಸೋಮೇಶ್ವರ ದೇವಾಲಯದಲ್ಲಿ ರಥೋತ್ಸವ

- Advertisement -
- Advertisement -

ಮಾಘ ಮಾಸ ಬಹುಳ ಶುಕ್ರವಾರ ವಿಶೇಷ ಪೂಜೆ, ಹೋಮ, ಅಭಿರ್ಜನ್ ಮಹೂರ್ತದಲ್ಲಿ ಮಧ್ಯಾಹ್ನ ಬ್ರಹ್ಮರಥೋತ್ಸವವನ್ನು ವೀರಗಾಸೆ ಮುಂತಾದ ಕಲಾ ತಂಡಗಳು ಹಾಗೂ ವಾಂದ್ಯ ವೃಂದ ಸಮೇತ ನಡೆಸಲಾಯಿತು. ಮಹಾಮಂಗಳಾರತಿ ಮತ್ತು ಪ್ರಸಾದ ವಿನಿಯೋಗ ನಡೆಸಲಾಯಿತು.
ಸುತ್ತಮುತ್ತಲ ಗ್ರಾಮಗಳು ಹಾಗೂ ತಾಲ್ಲೂಕುಗಳಿಂದ ನೂರಾರು ಭಕ್ತರು ಪೂಜೆ ಹಾಗೂ ರಥೋತ್ಸವದಲ್ಲಿ ಭಾಗವಹಿಸಿದ್ದರು. ವಿವಿಧ ಗ್ರಾಮಗಳವರು ಪಾನಕ ಬಂಡಿಗಳನ್ನು ತಂದು ಬಿಸಿಲಿನಲ್ಲಿ ದಣಿದ ಭಕ್ತರಿಗೆ ಉಚಿತವಾಗಿ ವಿತರಿಸಿದರು.
ರಥೋತ್ಸವಕ್ಕೆ ತಹಶೀಲ್ದಾರ್ ಜಿ.ಎ.ನಾರಾಯಣಸ್ವಾಮಿ ಮತ್ತು ಶಾಸಕ ಎಂ.ರಾಜಣ್ಣ ಚಾಲನೆ ನೀಡಿದರು. ಸುಮಾರು ಆರು ನೂರು ವರ್ಷಗಳ ಇತಿಹಾಸವಿರುವ ಸೋಮೇಶ್ವರ ದೇವಾಲಯದ ಆವರಣದಲ್ಲಿ ಇತಿಹಾಸವನ್ನು ಸಾರುವ ಹಲವಾರು ವೀರಗಲ್ಲುಗಳು ಹಾಗೂ ಶಾಸನ ಕಲ್ಲುಗಳಿವೆ. ರಥೋತ್ಸವದ ಅಂಗವಾಗಿ ಮಹಿಳೆಯರು ಮನೆಮನೆಯಿಂದಲೂ ದೀಪಗಳನ್ನು ತಂದು ದೇವರಿಗೆ ಬೆಳಗಿದರು. ದೇವಾಲಯವನ್ನು ವಿದ್ಯುತ್ ದೀಪಗಳಿಂದ ಮತ್ತು ಹೂಗಳಿಂದ ಅಲಂಕರಿಸಲಾಗಿತ್ತು.
ಗುಡಿಹಳ್ಳಿ ಜಿ.ವಿ.ಮುನಿವೆಂಕಟಸ್ವಾಮಪ್ಪ, ಚಿಕ್ಕವೆಂಕಟರೆಡ್ಡಿ, ಕಮಲಮ್ಮ, ಅಬ್ಲೂಡು ಬಿ.ಆಂಜನೇಯ, ಅರ್ಚಕ ಗಾಣಿಗರಹೊಸಹಳ್ಳಿಯ ಎಸ್.ನಂಜುಂಡಯ್ಯ, ಆಗಮಿಕರಾದ ಆರ್.ಗಣೇಶ್ ದೀಕ್ಷಿತ್, ಚನ್ನಕೃಷ್ಣಪ್ಪ ಮತ್ತಿತರರು ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!