15.1 C
Sidlaghatta
Tuesday, January 20, 2026

ಗುರುಪೂರ್ಣಿಮಾ ಕಾರ್ಯಕ್ರಮ

- Advertisement -
- Advertisement -

ತಾಲ್ಲೂಕಿನ ಮಳ್ಳೂರು ಗ್ರಾಮದ ಹೊರವಲಯದ ಸಾಯಿನಾಥ ಜ್ಞಾನಮಂದಿರದಲ್ಲಿ ಭಾನುವಾರ ಗುರುಪೂರ್ಣಿಮಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಗುರುಪೂರ್ಣಿಮಾ ಪ್ರಯುಕ್ತ ಮೂರು ದಿನಗಳಿಂದ ರಾಮಕೋಟಿ ಅಖಂಡ ಭಜನೆಯನ್ನು ಏರ್ಪಡಿಸಲಾಗಿತ್ತು. ಮಳ್ಳೂರು, ಅಪ್ಪೇಗೌಡನಹಳ್ಳಿ, ಯಲೆಯೂರು, ಚೌಡಸಂದ್ರ, ವಿಜಯಪುರ, ಬೆಳ್ಳೂಟಿ, ಬಳುವನಹಳ್ಳಿ, ಬೋದಗೂರು, ಮೇಲೂರು, ಕೊಮ್ಮಸಂದ್ರ, ತಿಪ್ಪೇನಹಳ್ಳಿ, ಭಕ್ತರಹಳ್ಳಿ ಗ್ರಾಮದ ಭಕ್ತರಿಂದ ಸರದಿಯಂತೆ ಹಗಲೂ ರಾತ್ರಿ ರಾಮಕೋಟಿ ಭಜನೆ ನಡೆಯಿತು. ಒಂಬತ್ತು ದಿನಗಳ ಕಾಲ ದಿನಕ್ಕೊಂದು ಗ್ರಾಮದಲ್ಲಿ ಭಜನೆ ಕಾರ್ಯಕ್ರಮವನ್ನು ನಡೆಸಲಾಗಿತ್ತು.
ಗುರುಪೂರ್ಣಿಮಾ ಅಂಗವಾಗಿ ಕಾಕಡಾರತಿ, ಪಂಚಾಮೃತಾಭಿಷೇಕ, ಸತ್ಯನಾರಾಯಣಸ್ವಾಮಿ ಪೂಜೆ, ಸಾಯಿ ಹೋಮ, ದತ್ತಾತ್ರೇಯ ಹೋಮ, ಶ್ರೀರಾಮ ತಾರಕ ಹೋಮ, ಮಹಾಮಂಗಳಾರತಿ, ಮಹಾಪ್ರಸಾದ ವಿನಿಯೋಗ ನಡೆಸಲಾಯಿತು. ಸಾವಿರಾರು ಸಂಖ್ಯೆಯಲ್ಲಿ ತಾಲ್ಲೂಕು ಹಾಗೂ ಸುತ್ತಮುತ್ತಲಿನ ತಾಲ್ಲೂಕುಗಳಿಂದ ಭಕ್ತರು ಆಗಮಿಸಿ ಪೂಜೆಯಲ್ಲಿ ಪಾಲ್ಗೊಂಡರು.
ಸಂಜೆ ದೇವಾಲಯದಲ್ಲಿ ಕಲಾವಿದರಾದ ಭೀರೇಶ ಮತ್ತು ತಂಡದವರಿಂದ ಸಂಗೀತ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
‘ಸಾಯಿನಾಥ ಜ್ಞಾನ ಮಂದಿರದಲ್ಲಿ ಹಲವಾರು ವರ್ಷಗಳಿಂದ ಗುರುಪೂರ್ಣಿಮಾ ಪೂಜಾ ಕಾರ್ಯಕ್ರಮವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸುತ್ತಿದ್ದೇವೆ. ಈ ವಿಶಿಷ್ಠ ದಿನ ಹೋಮ ಹವನಗಳನ್ನು ನಡೆಸಿ ವಿಶೇಷ ಪೂಜೆ ನಡೆಸುವುದರಿಂದ ಹೆಚ್ಚೆಚ್ಚು ಭಕ್ತರು ಆಗಮಿಸುತ್ತಾರೆ. ಎಲ್ಲರಿಗೂ ಪ್ರಸಾದವನ್ನು ವಿನಿಯೋಗಿಸುತ್ತಿದ್ದೇವೆ’ ಎಂದು ದೇವಾಲಯದ ಸಂಚಾಲಕ ನಾರಾಯಣಸ್ವಾಮಿ ತಿಳಿಸಿದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!