ಗುರುವಾರದಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಪ್ರಾರಂಭ

- Advertisement -
- Advertisement -

ತಾಲ್ಲೂಕಿನಲ್ಲಿ ಗುರುವಾರ ಪ್ರಾರಂಭವಾಗಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು, ಪರೀಕ್ಷಾ ಪಾವಿತ್ರತೆ, ಪಾರದರ್ಶಕತೆ ಹಾಗೂ ಮಕ್ಕಳ ಹಿತದೃಷ್ಠಿಯಿಂದ ಯಶಸ್ವಿಯಾಗಿ ನಿರ್ವಹಿಸಲು ಅಗತ್ಯ ಪೂರ್ವಸಿದ್ಧತೆಗಳನ್ನು ಮಾಡಿಕೊಂಡಿದ್ದು, ವಿವಿಧ ಕ್ರಮಗಳನ್ನು ತೆಗೆದುಕೊಂಡಿರುವುದಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಶ್ರೀನಿವಾಸ್ ತಿಳಿಸಿದ್ದರೆ.
ಪ್ರಸಕ್ತ ಸಾಲಿನಲ್ಲಿ ತಾಲ್ಲೂಕಿನಲ್ಲಿ ೧೨೯೨ ಬಾಲಕರು, ೧೨೪೯ ಬಾಲಕಿಯರು, ಒಟ್ಟು ೨೫೪೧ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಕರ್ನಾಟಕ ಪ್ರೌಢ ಶಿಕ್ಷಣಾ ಮಂಡಳಿಯ ನಿಯಮಗಳ ಅನ್ವಯ ಪರೀಕ್ಷಾಕೇಂದ್ರಗಳನ್ನು ರಚಿಸಿದ್ದೇವೆ. ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಪರಿಶೀಲಿಸಿ ದೃಢಪಡಿಸಿಕೊಳ್ಳಲಾಗಿದೆ. ಪರೀಕ್ಷೆಯು ಸುಗಮವಾಗಿ ನಡೆಯಲು ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಪಂಚಾಯಿತಿಯ ಪತ್ರ ಮುಖೇನ ಸಹಕಾರ ಪಡೆಯಲಾಗಿದೆ. ಪರೀಕ್ಷಾ ಅಕ್ರಮವನ್ನು ತಡೆಗಟ್ಟಲು ಹಾಗೂ ಶಾಂತಿಯುತವಾಗಿ ನಡೆಯಲು ತಾಲ್ಲೂಕಿನ ಪೊಲೀಸ್ ವ್ಯವಸ್ಥೆಯ ಸಹಾಯವನ್ನು ಸಹ ಕೋರಲಾಗಿದೆ.
ಪರೀಕ್ಷೆಯಲ್ಲಿ ಯಾವುದೇ ಲೋಪ ಆಗದಂತೆ ಪರೀಕ್ಷಾ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಮುಖ್ಯಅಧೀಕ್ಷರು.ಕಸ್ಟೋಡಿಯನ್ ಗಳ ಸರಣಿ ಸಭೆಗಳನ್ನು ನಡೆಸಿ ಅವರವರ ಕರ್ತವ್ಯಗಳ ಬಗ್ಗೆ ಮನವರಿಕೆಮಾಡಿಕೊಟ್ಟಿದ್ದು, ಪರೀಕ್ಷೆಗೆ ಸಂಬಂಧಿಸಿದ ಗೌಪ್ಯ ಸಾಮಾಗ್ರಿಗಳನ್ನು ಸಕಾಲದಲ್ಲಿ ಒದಗಿಸಿ, ಪರೀಕ್ಷಾಕೇಂದ್ರಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಸಂಬಂಧಿಸಿದ ಮುಖ್ಯಅಧೀಕ್ಷರುಗಳಿಗೆ ಸೂಚಿಸಲಾಗಿದೆ.
ತಾಲ್ಲೂಕಿನಲ್ಲಿ ಪ್ರಸ್ತುತ ವರ್ಷ ೧೦ ಪರೀಕ್ಷಾಕೇಂದ್ರಗಳನ್ನು ರಚಿಸಿದ್ದು, ಪ್ರತಿ ಪರಿಕ್ಷಾಕೇಂದ್ರಕ್ಕೆ ಅಗತ್ಯ ಸಂಖ್ಯೆಯ ಕೊಠಡಿ ಮೇಲ್ವಿಚಾಕರನ್ನು ನೇಮಕಮಾಡಿ ಆದೇಶಿಸಿದೆ. ತಾಲ್ಲೂಕಿನಾದ್ಯಂತ ಒಟ್ಟು ೧೭೦ ಕೊಠಡಿ ಮೇಲ್ವಿಚಾಕರನ್ನು ನಿಯೋಜಿಸಿದೆ. ಮಾರ್ಗಾಧಿಕಾರಿಗಳನ್ನು ಹಾಗೂ ಸ್ಥಾನಿಕ ಜಾಗೃತ ದಳದ ಸಿಬ್ಬಂದಿಯನ್ನು ನೇಮಕ ಮಾಡಿ ನಿಯಮಾನುಸಾರ ತಮ್ಮ ಕರ್ತವ್ಯಗಳನ್ನು ನಿರ್ವಹಿಸಲು ಸಂಪೂರ್ಣ ಸಹಕಾರವನ್ನು ನೀಡಲಾಗಿದೆ.
ಬಿಸಿಲಿನ ತಾಪ ಹೆಚ್ಚಿರುವುದರಿಂದ ಪರೀಕ್ಷಾರ್ಥಿಗಳ ಆರೋಗ್ಯದಲ್ಲಿ ಏರುಪೇರು ಆದಲ್ಲಿ ತರ್ತು ವೈದ್ಯೋಪಚಾರಕ್ಕಾಗಿ ಎ.ಎನ್.ಎಂ ಗಳನ್ನು ಪ್ರತಿ ಪರೀಕ್ಷಾಕೇಂದ್ರಕ್ಕೆ ನಿಯೋಜಿಸಲು ತಾಲ್ಲೂಕು ವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆ ಯವರನ್ನು ಕೋರಿರುವುದಾಗಿ ಅವರು ತಿಳಿಸಿದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!