Home News ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸಿ ಕರವೇ ಪ್ರತಿಭಟನೆ

ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸಿ ಕರವೇ ಪ್ರತಿಭಟನೆ

0

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸಿ ಗುರುವಾರ ಕನ್ನಡ ರಕ್ಷಣಾ ವೇದಿಕೆ ಸಂಘಟನೆಯ ಸದಸ್ಯರು ಪ್ರತಿಭಟನಾ ಮೆರವಣಿಗೆಯನ್ನು ನಡೆಸಿ ಗ್ರೇಡ್ 2 ತಹಶೀಲ್ದಾರ್ ಅವರಿಗೆ ಮನವಿಯನ್ನು ಸಲ್ಲಿಸಿದರು.
ನಗರದ ಬಸ್ ನಿಲ್ದಾಣದಿಂದ ಮೆರವಣಿಗೆಯನ್ನು ನಡೆಸಿ ಕರವೇ ಸದಸ್ಯರು ತಾಲ್ಲೂಕು ಕಚೇರಿಯ ಮುಂದೆ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿರುವ ಹಂತಕರನ್ನು ಬಂಧಿಸುವಂತೆ ಒತ್ತಾಯಿಸಿದರು.
ಗೌರಿ ಲಂಕೇಶ್ ಅವರ ಹತ್ಯೆ ಖಂಡನೀಯವಾಗಿದ್ದು, ಇದು ವಿಚಾರ ಹಿಂದಿನ ಮತ್ತು ವಿಚಾರ ಹತ್ತಿಕ್ಕುವ ಪ್ರಯತ್ನವಾಗಿದೆ. ರಾಜ್ಯ, ಕೇಂದ್ರ ಸರ್ಕಾರಗಳು ಪರಸ್ಪರ ರಾಜಕೀಯ ಲಾಭಕ್ಕೆ ಈ ಹತ್ಯೆಯನ್ನು ಉಪಯೋಗಿಸಿಕೊಳ್ಳದೆ, ತನಿಖೆ ನಡೆಸಿ, ಆರೋಪಿಗಳನ್ನು ಬಂಧಿಸುವ ಮೂಲಕ ಸಂವಿಧಾನ ಪರವಾಗಿದ್ದೇವೆಂದು ತೋರಿಸಬೇಕೆಂದು ಆಗ್ರಹಿಸಿದರು.
ವಿಚಾರವಾದಿ ಗೌರಿ ಲಂಕೇಶ್ ಹತ್ಯೆಯ ಹಿಂದಿರುವ ದುಷ್ಕರ್ಮಿಗಳನ್ನು ರಾಜ್ಯ ಸರ್ಕಾರ ಕೂಡಲೇ ಬಂಧಿಸಬೇಕು ಎಂದು ಗ್ರೇಡ್ 2 ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಕರವೇ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ, ಗೌರವಾಧ್ಯಕ್ಷ ನಾಗರಾಜ್, ಧನುಶ್ ಗೌಡ, ಶಿವಕುಮಾರ್, ಸುರೇಶ್, ಕೇಶವಮೂರ್ತಿ, ಮಣಿ, ಶ್ರೀಧರ್, ಅಪ್ಪು, ರವಿ, ಮೂರ್ತಿ, ಮುನಿಯಪ್ಪ, ತಂಗರಾಜು ಈ ಸಂದರ್ಭದಲ್ಲಿ ಹಾಜರಿದ್ದರು.
 

error: Content is protected !!