Home News ಗ್ರಾಮಾಂತರ ಸಾರಿಗೆಗೆ ಸಂಭ್ರಮಿಸಿದ ಗ್ರಾಮಸ್ಥರು

ಗ್ರಾಮಾಂತರ ಸಾರಿಗೆಗೆ ಸಂಭ್ರಮಿಸಿದ ಗ್ರಾಮಸ್ಥರು

0

ಭಕ್ತರಹಳ್ಳಿ, ಕಾಕಚೊಕ್ಕಂಡಹಳ್ಳಿ, ನಾಗಮಂಗಲ, ಹೊಸಪೇಟೆ ಮತ್ತು ಜಂಗಮಕೋಟೆ ಮಾರ್ಗವಾಗಿ ಶಿಡ್ಲಘಟ್ಟಕ್ಕೆ ಹಾದು ಹೋಗುವ ಸಾರಿಗೆ ಬಸ್ ವ್ಯವಸ್ಥೆಗೆ ಗುರುವಾರ ಮುಂಜಾನೆ ಚಾಲನೆ ನೀಡಲಾಯಿತು.
ನಾಗಮಂಗಲ ಗ್ರಾಮದಲ್ಲಿ ನೂತನವಾಗಿ ಆರಂಭವಾದ ಬಸ್ ಸಂಚಾರಕ್ಕೆ ಸಂಭ್ರಮಿಸಿದ ಗ್ರಾಮಸ್ಥರು ಪೂಜೆ ಸಲ್ಲಿಸಿ ಸಿಹಿ ಹಂಚಿದರು. ಗ್ರಾಮದಿಂದ ಸಂಚರಿಸುವ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಇದರಿಂದ ಸಾಕಷ್ಟು ಅನುಕೂಲ ಎಂದು ತಿಳಿಸಿದರು.
ಕಳೆದ ೨೦ ವರ್ಷಗಳಿಂದ ಈ ಮಾರ್ಗದಲ್ಲಿ ಬಸ್ ವ್ಯವಸ್ಥೆಯಲ್ಲದೆ ಸಾರ್ವಜನಿಕರು ಪರದಾಡುವಂತಾಗಿದ್ದರು. ಬಸ್ ಸಂಚಾರ ಕಲ್ಪಿಸಿರುವುದರಿಂದ ಓಡಾಟಕ್ಕೆ ಸುಲಭವಾಗಿದೆ ಎಂದು ಗ್ರಾಮ ಪಂಚಾಯತಿ ಸದಸ್ಯ ಶ್ರೀನಿವಾಸ್ ಗೌಡ ಹರ್ಷ ವ್ಯಕ್ತಪಡಿಸಿದರು.
ಈ ಸಂಧರ್ಭದಲ್ಲಿ ನಾಗಮಂಗಲ ಪಂಚಾಯತಿಯ ಅಧ್ಯಕ್ಷೆ ರೂಪ, ಶ್ರೀನಿವಾಸ್, ಶಂಕರಪ್ಪ, ತಮ್ಮಣ್ಣ, ಚನ್ನಕೇಶವ, ನಾರಾಯಣಸ್ವಾಮಿ, ಮುರಳಿ, ರಾಜಣ್ಣ, ಶಿವರಾಜ್, ಮಂಜುನಾಥ್,ವೆಂಕಟೇಶ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.