ತಾಲ್ಲೂಕಿನ ತಲಕಾಯಲಬೆಟ್ಟದಲ್ಲಿ ಈಚೆಗೆ ಅಂತರಾಷ್ಟ್ರಿಯ ಮಹಿಳಾ ದಿನಾಚರಣೆಯಡಿಯಲ್ಲಿ ನೈಸರ್ಗಿಕ ಸಂಪನ್ಮೂಲಗಳ ಅಭಿವೃದ್ಧಿ ಮತ್ತು ನಿರ್ವಹಣೆ ಮೂಲಕ ಗ್ರಾಮೀಣ ಜೀವನಾಧಾರಗಳ ಅಭಿವೃದ್ಧಿ ಕುರಿತು ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.
ಶಿಡ್ಲಘಟ್ಟ ಮತ್ತು ಚಿಂತಾಮಣಿ ತಾಲ್ಲೂಕಿನ ಬಶೆಟ್ಟಳ್ಳಿ, ಎಸ್. ದೇವಗಾನಹಳ್ಳಿ, ದಿಬ್ಬೂರಹಳ್ಳಿ, ತಿಮ್ಮನಾಯಕನಹಳ್ಳಿ, ಈ. ತಿಮ್ಮಸಂದ್ರ, ಕೊರ್ಲಪರ್ತಿ ಮತ್ತು ತಲಕಾಯಲಬೆಟ್ಟದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವಂತಹ ೩೫ ಹಳ್ಳಿಯಲ್ಲಿರುವ ೭೦ ಸ್ವ-ಸಹಾಯ ಸಂಘಗಳಿಂದ ಪ್ರತಿನಿಧಿಗಳು, ಗ್ರಾಮ ಅಭಿವೃದ್ಧಿ ಸಮಿತಿ ಪ್ರತಿನಿಧಿಗಳು ಮತ್ತು ಸಮೂದಾಯ ಸಂಪನ್ಮೂಲ ವ್ಯಕ್ತಿಗಳು, ಒಟ್ಟು ೫೦೦ ಮಂದಿ ಈ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕುಟುಂಬದ ಅಭಿವೃದ್ಧಿಯಲ್ಲಿ ಮಹಿಳೆಯರು ಅತಿ ಮುಖ್ಯವಾದ ಪಾತ್ರವನ್ನು ನಿರ್ವಸುತ್ತಾ ಜೊತೆಗೆ ತನ್ನ ಗ್ರಾಮದ ಅಭಿವೃದ್ಧಿಯಲ್ಲಿಯೂ ಸಹಕಾರ ನಿಡುತ್ತಾರೆ. ಇಂದಿನ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ಪುರುಷರಿಗೆ ಸಮಾನವಾಗಿ ಕಾರ್ಯನಿರ್ವಹಿಸುತ್ತಿರುವುದರ ಬಗ್ಗೆ ಹಾಗೂ ಸಾಮೂಹಿಕ ಭೂಮಿ, ಜಲಮೂಲಗಳ ಸಂರಕ್ಷಣೆ ಮತ್ತು ಅಭಿವೃದ್ಧಿಯ ಬಗ್ಗೆ ಸಹ ಕಾರ್ಯಕ್ರಮದಲ್ಲಿ ವಿವರಣೆ ಮತ್ತು ಚರ್ಚೆ ನಡೆಸಲಾಯಿತು.
ದಿಬ್ಬೂರಹಳ್ಳಿ ಕೆನರಾ ಬ್ಯಾಂಕಿನ ವ್ಯವಸ್ಥಾಪಕ ಜಯಂತ್ ಕಲಾಸ್ಕರ ಬ್ಯಾಂಕಿನಿಂದ ಸಿಗುವಂತಹ ಸೌಲಭ್ಯಗಳು ಮತ್ತು ವಿಮೆ ಬಗ್ಗೆ ವಿವರವಾಗಿ ತಿಳಿಸಿದರು ಮತ್ತು ಸ್ವ-ಸಹಾಯ ಸಂಘಗಳು ಮುಂದೆ ಬರಲು ಪ್ರೇರೇಪಿಸಿದರು.
ಸಂಸ್ಥೆಯ ತರಬೇತಿದಾರ ಪಾರ್ಥ, ಹಿರಿಯ ಯೋಜನಾಧಿಕಾರಿ ನಿಖತ್ ಪರ್ವಿನ್, ಸಿಬ್ಬಂದಿಗಳಾದ ಸೌಭಾಗ್ಯ, ಗೋಪಿ, ಲೀಲಾವತಿ ಮತ್ತು ಕಲಾತಂಡದವರು ಹಾಜರಿದ್ದರು.
- Advertisement -
- Advertisement -
- Advertisement -
- Advertisement -