23.1 C
Sidlaghatta
Wednesday, September 27, 2023

ಗ್ರಾಮೀಣ ಭಾಗದ ಮಕ್ಕಳಿಗೆ ಸೌಲಭ್ಯಗಳನ್ನು ನೀಡಬೇಕು

- Advertisement -
- Advertisement -

ಶಿಡ್ಲಘಟ್ಟ ಗ್ರಾಮದ ಮಕ್ಕಳಿಗೂ ಲಭಿಸಿದಾಗ ಅವರ ಪ್ರತಿಭೆ ಅನಾವರಣಗೊಳ್ಳುತ್ತದೆ ಎಂದು ಅವಿರತ ಟ್ರಸ್ಟ್ನ ಸದಸ್ಯ ಶಿವಪ್ರಕಾಶ್ ತಿಳಿಸಿದರು.
ತಾಲ್ಲೂಕಿನ ವೈ ಹುಣಸೇನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಡ್ಡದಾಸೇನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಶನಿವಾರ ಅವಿರತ ಟ್ರಸ್ಟ್ ವತಿಯಿಂದ ಶಾಲೆಗೆ ಉಚಿತ ಕಂಪ್ಯೂಟರ್ ಮತ್ತು ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದ್ದರೂ ಪೋಷಕರು ಖಾಸಗಿ ಶಾಲೆಗಳ ಪರ ಒಲವು ತೋರಿಸುತ್ತಿರುವುದು ವಿಷಾದನೀಯ. ಗ್ರಾಮೀಣ ಭಾಗದ ಮಕ್ಕಳು ಸರ್ಕಾರಿ ಶಾಲೆಯಲ್ಲಿ ಸಿಗುವ ಗುಣಮಟ್ಟದ ಶಿಕ್ಷಣ ಪಡೆದು ಸಮಾಜದ ಮುಖ್ಯವಾಹಿನಿಗೆ ಬರುವಂತಾಗಬೇಕು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ರಘುನಾಥರೆಡ್ಡಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ನುರಿತ ಶಿಕ್ಷಕರು ಸೇರಿದಂತೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಹಾಗಾಗಿ ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಪೋಷಕರು ಒಳಗಾಗದೇ ಸರ್ಕಾರಿ ಶಾಲೆಗಳಲ್ಲಿ ತಮ್ಮ ಮಕ್ಕಳನ್ನು ದಾಖಲಿಸಲು ಮುಂದಾಗಬೇಕು ಎಂದರು.
ಅವಿರತ ಟ್ರಸ್ಟ್ನ ರಾಜೇಶ್, ಮೃತ್ಯುಂಜಯ, ಗ್ರಾಮ ಪಂಚಾಯತಿ ಸದಸ್ಯ ಆಂಜನೇಯರೆಡ್ಡಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಶ್ರೀನಿವಾಸ್, ಎಂ.ಪಿ.ಸಿ.ಎಸ್. ಅಧ್ಯಕ್ಷ ದ್ಯಾವರೆಡ್ಡಿ, ಶಿಕ್ಷಕರಾದ ಶ್ರೀಕಾಂತ್, ಹರೀಶ್ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!