ಶಿಡ್ಲಘಟ್ಟ ತಾಲ್ಲೂಕಿನ ಪಲಿಚೇರ್ಲು ಗ್ರಾಮ ಪಂಚಾಯತಿಯ ಅಧ್ಯಕ್ಷರಾಗಿ ಬಿ.ಗೋಪಿ ಉಪಾಧ್ಯಕ್ಷರಾಗಿ ಮಮತಾ ಬುಧವಾರ ಆಯ್ಕೆಯಾದರು. ಚುನಾವಣಾಧಿಕಾರಿ ಸಣ್ಣ ನೀರಾವರಿ ಎಂಜಿನಿಯರ್ ಗಣಪತಿ ಸಾಕರೆ, ಪಿ.ಡಿ.ಒ ವಜ್ರೇಶ್, ಕಾರ್ಯದರ್ಶಿ ಆಂಜನೇಯರೆಡ್ಡಿ, ರಾಮಚಂದ್ರಪ್ಪ, ವೆಂಕಟಶಿವಪ್ಪ, ಪ್ರಕಾಶ್, ಡಿ.ವಿ.ವೆಂಕಟೇಶ್, ಗ್ರಾಮ ಪಂಚಾಯತಿ ಸದಸ್ಯರಾದ ಮಂಜುನಾಥ, ಅರುಣಾ, ಮುನಿಯಪ್ಪ, ರಾಧಮ್ಮ, ಗಂಗಪ್ಪ, ಶಾಂತಮ್ಮ, ಹೇಮ, ಶೈಲಮ್ಮ, ರಾಮಾಂಜಿನಪ್ಪ ಹಾಜರಿದ್ದರು.
ಶಿಡ್ಲಘಟ್ಟ ತಾಲ್ಲೂಕಿನ ಬಶೆಟ್ಟಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಎನ್. ಪುಷ್ಪ ಮತ್ತು ಉಪಾಧ್ಯಕ್ಷರಾಗಿ ಗೌಡನಹಳ್ಳಿ ಚಿಕ್ಕನಾರಾಯಣಸ್ವಾಮಿ ಅವಿರೋಧವಾಗಿ ಬುಧವಾರ ಆಯ್ಕೆಯಾದರು. ಚುನಾವಣಾಧಿಕಾರಿ ಸಮಾಜ ಕಲ್ಯಾಣಾಧಿಕಾರಿ ಪುರುಷೋತ್ತಮ್, ಕೆ.ಪಿ.ಸಿ.ಸಿ ಉಪಾಧ್ಯಕ್ಷ ವಿ.ಮುನಿಯಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ, ಜಯರಾಮರೆಡ್ಡಿ, ಚಿಕ್ಕನಾರಾಯಣಪ್ಪ, ಶಿವಣ್ಣ, ಶ್ರೀನಿವಾಸ್, ವೆಂಕಟೇಶ್, ಕೆ. ದೇವಾ, ಬಾಲಕೃಷ್ಣ, ಸೋನ್ನೆಗೌಡ, ಚಂದ್ರಪ್ಪ, ಆಂಜಿನಪ್ಪ ಹಾಜರಿದ್ದರು.
ಶಿಡ್ಲಘಟ್ಟ ತಾಲ್ಲೂಕಿನ ವೈ.ಹುಣಸೇನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಶೀಗೆಹಳ್ಳಿಯ ಹರಿಪ್ರಸಾದ್ ಹಾಗೂ ಉಪಾಧ್ಯಕ್ಷರಾಗಿ ವೈ.ಹುಣಸೇನಹಳ್ಳಿಯ ದೇವರಾಜ್ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿ ತೋಟಗಾರಿಕೆ ಹಿರಿಯ ಸಹಾಯಕ ನಿರ್ದೆಶಕ ಆನಂದ್, ದೊಣ್ಣಹಳ್ಳಿ ರಾಮಣ್ಣ, ಗೊರಮಡಗು ರಾಮಾಂಜಿನಪ್ಪ, ಪಿಎಲ್ಡಿ ಬ್ಯಾಂಕ್ ನಿರ್ದೆಶಕ ಅಶ್ವತ್ಥಪ್ಪ, ಮುದ್ದುಕೃಷ್ಣ, ರಾಘವೇಂದ್ರ, ನಾರಾಯಣಸ್ವಾಮಿ, ವೇಣು, ರಾಜಣ್ಣ ಹಾಜರಿದ್ದರು.
ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಗ್ರಾಮ ಪಂಚಾಯತಿಯ ಅಧ್ಯಕ್ಷರಾಗಿ ರಹಮತ್ಜಾನ್ ಹಾಗೂ ಉಪಾಧ್ಯಕ್ಷರಾಗಿ ಜೆ.ಎಂ.ನಾರಾಯಣಸ್ವಾಮಿ ಬುಧವಾರ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ರಾಮಾನುಜಯ್ಯ, ಸದಸ್ಯರಾದ ಶ್ರೀನಿವಾಸ್, ತಾಲ್ಲೂಕು ಪಂಚಾಯತಿ ವಲಿಬಾಷಾ, ಮಂಜುನಾಥ್, ಗೋಪಿನಾಥ್, ಗೋಪಾಲಕೃಷ್ಣಯ್ಯ, ಪಂಚಾಯತಿ ಪಿ.ಡಿ.ಓ.ಶಂಕರಪ್ಪ ಹಾಜರಿದ್ದರು.
- Advertisement -
- Advertisement -
- Advertisement -
- Advertisement -