ಶೌಚಾಲಯ ನಿರ್ಮಾಣ, ಚರಂಡಿ ಸ್ವಚ್ಛತೆ, ಗ್ರಾಮ ಸ್ವಚ್ಛತೆ ಹಾಗೂ ಇಂಗುಗುಂಡಿ ನಿರ್ಮಾಣ ಕುರಿತಂತೆ ಜಾಗೃತಿಯನ್ನು ಪ್ರತಿ ಹಳ್ಳಿಗಳಲ್ಲೂ ನಡೆಸಬೇಕು ಎಂದು ಗ್ರಾಮ ಪಂಚಾಯತಿ ಅಧ್ಯಕ್ಷ ಮುನಿಯಪ್ಪ ತಿಳಿಸಿದರು.
ತಾಲ್ಲೂಕಿನ ಶಿಲೇಮಾಕನಹಳ್ಳಿ ಗ್ರಾಮದಲ್ಲಿ ಮಂಗಳವಾರ ಹಂಡಿಗನಾಳ ಗ್ರಾಮ ಪಂಚಾಯತಿಯ ವತಿಯಿಂದ ನಡೆಸಿದ ‘ರೋಜ್ಗಾರ್ ದಿವಸ್ ಆಚರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸೌಲಭ್ಯದೊಂದಿಗೆ ಜಲಮರುಪೂರಣ ಘಟಕದ ಸೌಲಭ್ಯವನ್ನು ಹೊಂದಬಹುದಾಗಿದೆ. ಸಾಂಕ್ರಾಮಿಕ ರೋಗಗಳು ಹರಡದಂತೆ ಗ್ರಾಮಗಳಲ್ಲಿ ಸ್ವಚ್ಛತೆಗೆ ಪ್ರಾಮುಖ್ಯತೆಯನ್ನು ನೀಡಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಶಿಲೇಮಾಕನಹಳ್ಳಿ ಗ್ರಾಮವನ್ನು ಬಯಲು ಶೌಚ ಮುಕ್ತ ಗ್ರಾಮವನ್ನಾಗಿಸಲು ಉಳಿದಿರುವ 17 ಶೌಚಾಲಯಗಳನ್ನು ನಿರ್ಮಿಸಲು ಗ್ರಾಮಸ್ಥರನ್ನು ಒಪ್ಪಿಸಲಾಯಿತು.
ಗ್ರಾಮ ಪಂಚಾಯತಿ ಸದಸ್ಯರಾದ ಜಯರಾಮ್, ಎ.ಎಂ.ತ್ಯಾಗರಾಜ್, ಕಾರ್ಯದರ್ಶಿ ಶ್ರೀನಿವಾಸ್, ಮುನಿರಾಜು, ಶಿಕ್ಷಕ ಷಾನವಾಜ್, ಅಂಗನವಾಡಿ ಶಿಕ್ಷಕಿ ಅಂಬುಜಮ್ಮ ಮತ್ತಿತರರು ಹಾಜರಿದ್ದರು.
- Advertisement -
- Advertisement -
- Advertisement -