ಪಟ್ಟಣದ ಹೊರವಲಯದ ಚಿಂತಾಮಣಿ ರಸ್ತೆಯಲ್ಲಿರುವ ಪುರಾತನ ಚಂದ್ರಶೇಖರಸ್ವಾಮಿ ಗುಡಿಯಲ್ಲಿರುವ ವಿನಾಯಕನ ಶಿಲ್ಪವನ್ನು ದುಷ್ಕರ್ಮಿಗಳು ಮಂಗಳವಾರ ರಾತ್ರಿ ಕದ್ದೊಯ್ದಿದ್ದಾರೆ.
ಅತ್ಯಂತ ಪುರಾತನವಾದ ದೇವಾಲಯದಲ್ಲಿರುವ ಗಣೇಶನ ಮೂರ್ತಿಯೂ ಕೂಡ ಪುರಾತನದ್ದಾಗಿದ್ದು, ಕಲ್ಲಿನಲ್ಲಿ ಕೆತ್ತಿದ ಶಿಲ್ಪವು ಬಹಳ ಸುಂದರವಾಗಿತ್ತು. ಕದ್ದೊಯ್ಯುವ ಮುನ್ನ ಸ್ಥಳದಲ್ಲಿ ಪೂಜೆ ನಡೆಸಿರುವ ಕುರುಹಾಗಿ ಅರಿಶಿನ ಕುಂಕುಮ ಕಂಡುಬರುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -