27.2 C
Sidlaghatta
Thursday, July 10, 2025

ಚಿಕಿತ್ಸೆ ದುಬಾರಿಯಾಗಿದೆ, ಉಚಿತ ಶಿಬಿರವನ್ನು ಸದ್ಭಳಕೆ ಮಾಡಿಕೊಳ್ಳಿ

- Advertisement -
- Advertisement -

ಆರೋಗ್ಯ ಸಂಬಂಧಿಸಿದ ತಪಾಸಣೆ ಮತ್ತು ಚಿಕಿತ್ಸೆ ದುಬಾರಿಯಾಗಿರುವಾಗ ನುರಿತ ತಜ್ಞರು ಉಚಿತವಾಗಿ ಆರೋಗ್ಯ ತಪಾಸಣಾ ಶಿಬಿರವನ್ನು ನಡೆಸುತ್ತಿದ್ದಾರೆ. ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಸಿ.ನಂದೀಶ್ ತಿಳಿಸಿದರು.
ನಗರದ ಅರಳೇಪೇಟೆಯ ಬಸವೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿ ಭಾನುವಾರ ತಾಲ್ಲೂಕು ಬಿಜೆಪಿ ಘಟಕ ಹಾಗೂ ಬೆಂಗಳೂರು ಸ್ಪೆಷಲಿಸ್ಟ್ ಆಸ್ಪತ್ರೆಯ ಸಹಯೋಗದಲ್ಲಿ ಪಂಡಿತ್‌ ದೀನ ದಯಾಳ್‌ ಉಪಾಧ್ಯಾಯ ಅವರ 100ನೇ ಜನ್ಮದಿನಾಚರಣೆ, ಡಾ.ಬಿ.ಆರ್‌.ಅಂಬೇಡ್ಕರ್‌ ಅವರ 125ನೇ ಜನ್ಮದಿನಾಚರಣೆ ಮತ್ತು ಅಟಲ್ ಬಿಹಾರಿ ವಾಜಪೇಯಿರವರ ಜನ್ಮ ದಿನದ ಪ್ರಯುಕ್ತ ಉಚಿತ ಆರೋಗ್ಯ ಶಿಬಿರವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ಬೆಂಗಳೂರಿನ ಸ್ಪೆಷಲಿಸ್ಟ್ ಆಸ್ಪತ್ರೆಯ ನುರಿತ ಫಿಸಿಷಿಯನ್, ಹೃದ್ರೋಗ ತಜ್ಞರು, ಮೂಳೆ ಮತ್ತು ಕೀಲು ತಜ್ಞರು, ನರರೋಗ ತಜ್ಞರು, ಸ್ತ್ರೀ ಮತ್ತು ಪ್ರಸೂತಿ ತಜ್ಞರು ಸೇರಿದಂತೆ ನುರಿತ ತಜ್ಞ ವೈದ್ಯರು ಆಗಮಿಸಿದ್ದಾರೆ. ಈ ಅವಕಾಶವನ್ನು ಬಳಸಿಕೊಳ್ಳುವಂತೆ ಹೇಳಿದರು.
ಬೆಂಗಳೂರಿನ ಸ್ಪೆಷಲಿಸ್ಟ್ ಆಸ್ಪತ್ರೆಯ ಮುಖ್ಯಸ್ಥ ಪ್ರಶಾಂತ್, ತಜ್ಞ ವೈದ್ಯರು, ರವಿನಾರಾಯಣರೆಡ್ಡಿ, ಸುರೇಂದ್ರ ಗೌಡ, ಶ್ರೀರಾಮರೆಡ್ಡಿ, ಮುರಳಿ, ದಾಮೋದರ್, ಲೋಕೇಶ್‌ಗೌಡ ಮತ್ತಿತರರು ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!