ಮಕ್ಕಳು ಕೇವಲ ಪುಸ್ತಕ ಓದಿನಲ್ಲಿ ತಲ್ಲೀನರಾದರೆ ಸಾಲದು ಬದಲಿಗೆ ದೈಹಿಕವಾಗಿಯೂ ಸದೃಢರಾಗಬೇಕು. ಅದಕ್ಕೆ ಸೂಕ್ತ ಮಾರ್ಗದರ್ಶನ ಅಗತ್ಯ. ಹಾಗಾಗಿ ಉಚಿತವಾಗಿ 10 ದಿನಗಳ ಕಾಲ ನಡೆಸುವ ಬೇಸಿಗೆ ಶಿಬಿರದ ಸದುಪಯೋಗವನ್ನು ಮಕ್ಕಳು ಪಡೆದುಕೊಳ್ಳಬೇಕು ಎಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಉಲ್ಲೂರು ಪೇಟೆಯ ಮುಖ್ಯ ಶಿಕ್ಷಕ ಎನ್.ಕೃಷ್ಣಮೂರ್ತಿ ತಿಳಿಸಿದರು.
ನಗರದ ಚಿಂತಾಮಣೆ ರಸ್ತೆಯಲ್ಲಿ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಉಲ್ಲೂರು ಪೇಟೆ ಶಾಲೆ ಆವರಣದಲ್ಲಿ ಗುರುವಾರ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತ್, ಶಿಶು ಅಭಿವೃದ್ದಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಡ್ಲಘಟ್ಟ, ರಾಜ್ಯ ಬಾಲ ಭವನ ಸೊಸೈಟಿ ಬೆಂಗಳೂರು, ತಾಲ್ಲೂಕು ಬಾಲ ಭವನ ಸಮಿತಿ, ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ:-04-05-2017 ರಿಂದ 15-05-2017ರ ವರಗೆ “ಚಿಣ್ಣರ ಚಿಲಿಪಿಲಿ ಮೇಳ” ತಾಲ್ಲೂಕು ಮಟ್ಟದ ಬೇಸಿಗೆ ಶಿಬಿರದ ಕಾರ್ಯಾಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಶಾಲೆಗೆ ರಜೆ ಬಂದರೆ ಮಕ್ಕಳು ವಿವಿಧ ಆಟೋಟಗಳು ಸೇರಿದಂತೆ ಕೇವಲ ಟಿವಿ, ಮೊಬೈಲು, ಟ್ಯಾಬ್ಗಳ ಮುಂದೆ ಕುಳಿತುಕೊಂಡು ತಮ್ಮ ಕ್ರಿಯಾಶೀಲತೆಯನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.
ಎಳೆಯ ವಯಸ್ಸಿನಲ್ಲಿಯೇ ಮಕ್ಕಳಿಗೆ ಕ್ರೀಡೆಯಲ್ಲಿ ಪ್ರೋತ್ಸಾಹಿಸುವ ಮೂಲಕ ಅವರ ಪ್ರತಿಭೆಯನ್ನು ಗುರುತಿಸಬೇಕು. ಮಕ್ಕಳನ್ನು ದೈಹಿಕವಾಗಿ ಸದೃಡಗೊಳಿಸುವ ನಿಟ್ಟಿನಲ್ಲಿ ಪೋಷಕರು ಮಕ್ಕಳಿಗೆ ಇಂತಹ ಶಿಬಿರಗಳಲ್ಲಿ ಪಾಲ್ಗೊಳ್ಳುವಂತೆ ಮನವರಿಕೆ ಮಾಡಿಕೊಡಬೇಕು ಎಂದರು.
ಈ ಶಿಬಿರದಲ್ಲಿ ಯೋಗ, ಕರಾಟೆ, ಕರಕುಶಲತೆ, ಚಿತ್ರ ಕಲೆ, ಎಂಬ್ರಾಮಿಡರಿ, ಹಾಗೂ ಸಂಸ್ಕøತಿ ಮತ್ತು ನೃತ್ಯ ತರಬೇತಿ ಶಿಬಿರಗಳು ಇದ್ದು, ಮಕ್ಕಳು ಈ ಶಿಬಿರದಲ್ಲಿ ಪಾಲ್ಗೊಂಡು ಸದುಪಯೋಗ ಪಡೆಯಬೇಕೆಂದು ಕೋರಿದರು.
ಈ ಸಂದರ್ಭದಲ್ಲಿ ಮೇಲ್ವಿಚಾರಕಿ ಗಿರಿಜಾಂಭಿಕ, ಸಂಗೀತ ಶಿಕ್ಷಕರಾದ ಎಸ್.ವಿ.ರಾಮಮೂರ್ತಿ, ಲಕ್ಷ್ಮೀನಾರಾಯಣ ಹಾಗೂ ಮುಂತಾದವರು ಹಾಜರಿದ್ದರು.