ಜೆಡಿಎಸ್ ತೊರೆದು ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆಂಬ ಕಾರಣಕ್ಕೆ ರಾತ್ರಿಯಲ್ಲಿ ಹಲ್ಲೆ ನಡೆಸಿ ಗಾಯಗೊಳಿಸಿದ್ದಾರೆ ಎಂದು ದೊಗರನಾಯಕನಹಳ್ಳಿಯ ಮುನಿವೆಂಕಟಪ್ಪ, ಬಾಬು, ಲಕ್ಷ್ಮಣ್ ಎಂಬುವವರು ಭಾನುವಾರ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
‘ತಾಲ್ಲೂಕಿನ ದೊಗರನಾಯಕನಹಳ್ಳಿ ಗ್ರಾಮದ ನಾವು ಕಳೆದ ಕೆಲ ದಿನಗಳ ಹಿಂದೆ ಜೆಡಿಎಸ್ ತೊರೆದು ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದರಿಂದ, ಶನಿವಾರದಂದು ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆ ಮುಗಿದ ನಂತರ, ಸಂಜೆ ೭ ಗಂಟೆಯ ಸಮಯದಲ್ಲಿ ಜೆಡಿಎಸ್ನ ೧೦ ಮಂದಿಯ ಗುಂಪೊಂದು ಏಕಾಏಕಿ ದಾಳಿ ಮಾಡಿ, ದೊಣ್ಣೆಗಳಿಂದ, ಹೊಡೆದಿದ್ದಾರೆ’ ಎಂದು ಗಾಯಾಳುಗಳು ತಿಳಿಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -
- Advertisement -
- Advertisement -