20.6 C
Sidlaghatta
Tuesday, July 15, 2025

ಚೆಕ್ ಡ್ಯಾಮ್ ನಿರ್ಮಾಣಕ್ಕೆ ಗುದ್ದಲಿಪೂಜೆ

- Advertisement -
- Advertisement -

ಮಳೆ ನೀರನ್ನು ಹಾಗೂ ಹರಿದು ಹೋಗುವ ನೀರನ್ನು ಹಿಡಿದಿಟ್ಟುಕೊಳ್ಳುವ ಮೂಲಕ ಅಂತರ್ಜಲ ವೃದ್ಧಿ ಹಾಗೂ ಬೆಳೆಗೆ ಅನುಕೂಲವಾಗಲಿದೆ ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು.
ತಾಲ್ಲೂಕಿನ ತಿಮ್ಮನಾಯಕನಹಳ್ಳಿ ಗ್ರಾಮ ಪಂಚಾಯ್ತಿಯ ನಲ್ಲೋಜನಹಳ್ಳಿ ಗ್ರಾಮದ ಅಗ್ರಹಾರ ಕೆರೆ ಅಚ್ಚುಕಟ್ಟೆ ಪ್ರದೇಶಕ್ಕೆ ಹಾದುಹೋಗುವ ರಸ್ತೆಯಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಚೆಕ್ ಡ್ಯಾಮ್ ಹಾಗೂ ಸೇತುವೆಯ ಕಾಮಗಾರಿಗೆ ಗುರುವಾರ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ನಮ್ಮ ಭಾಗದಲ್ಲಿ ಈಗ ನೀರು ಅತ್ಯಮೂಲ್ಯ. ನೀರನ್ನು ಪೋಲು ಮಾಡದೆ ಹಿಡಿದಿಡುವ ಮೂಲಕ ಬಳಸಿಕೊಳ್ಳಬೇಕಿದೆ. ಕಾಮಗಾರಿಯ ಗುಣಮಟ್ಟವನ್ನು ಗ್ರಾಮಸ್ಥರು ಗಮನಿಸಿಕೊಳ್ಳಬೇಕು ಎಂದು ಹೇಳಿದರು.
ಮುಖಂಡರಾದ ಕೆ. ಬಾವರೆಡ್ಡಿ, ಬಿ.ಶಿವಕುಮಾರ್, ಧನಂಜಯರೆಡ್ಡಿ, ನಾಗರಾಜ್, ಮುನಿಯಪ್ಪ, ಬಚ್ಚರೆಡ್ಡಿ, ಶ್ರೀರಾಮ, ಶಿವಾರೆಡ್ಡಿ, ವೆಂಕಟರೆಡ್ಡಿ, ಶಿವಣ್ಣ, ನರಸಿಂಹ ಮೂರ್ತಿ, ಈರಪ್ಪ, ಮುನಿರೆಡ್ಡಿ ಈ ಸಂದರ್ಭದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!