ಜಂಗಮಕೋಟೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

- Advertisement -
- Advertisement -

ತಾಲ್ಲೂಕಿನ ಜಂಗಮಕೋಟೆಯ ಜ್ಯೋತಿ ಆಂಗ್ಲ ಪ್ರೌಢಶಾಲೆಯ ಆವರಣದಲ್ಲಿ ಸೆಪ್ಟೆಂಬರ್ 25 ರ ಭಾನುವಾರ ಉಚಿತವಾಗಿ ಬೃಹತ್ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿದ್ದು, ಸಾರ್ವಜನಿಕರು ಇದರ ಸದುಪಯೋಗ ಮಾಡಿಕೊಳ್ಳುವಂತೆ ಎಸ್.ಎನ್.ಕ್ರಿಯಾ ಟ್ರಸ್ಟ್ ಅಧ್ಯಕ್ಷ ಆಂಜಿನಪ್ಪ ತಿಳಿಸಿದರು.
ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಹೊಸಕೋಟೆಯ ಎಂ.ವಿ.ಜೆ ಆಸ್ಪತ್ರೆಯ ಸಹಯೋಗದೊಂದಿಗೆ ಎಸ್.ಎನ್.ಕ್ರಿಯಾ ಟ್ರಸ್ಟ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ನಡೆಸುತ್ತಿದೆ. ಹಲವಾರು ಮಂದಿ ತಜ್ಞ ವೈದ್ಯರು ಆಗಮಿಸುತ್ತಿದ್ದಾರೆ. ಮಧುಮೇಹ, ರಕ್ತದೊತ್ತಡ, ಕಣ್ಣು, ಮೂಳೆ, ಮಕ್ಕಳ ತಜ್ಞರು ಹಾಗೂ ಸ್ತ್ರೀ ರೋಗ ತಜ್ಞರು ಹಾಜರಿರುತ್ತಾರೆ. ಈ ಸಂದರ್ಭದಲ್ಲಿ ಔಷಧಿಗಳನ್ನು ಉಚಿತವಾಗಿ ನೀಡಲಿದ್ದೇವೆ. ಯಶಸ್ವಿನಿ ಮತ್ತು ಆರ್ಎಸ್ಬಿವೈ ಕಾರ್ಡ್ ಹೊಂದಿರುವವರಿಗೆ ಉಚಿತವಾಗಿ ಶಸ್ತ್ರಚಿಕಿತ್ಸೆಯನ್ನು ಹೊಸಕೋಟೆಯ ಎಂ.ವಿ.ಜೆ ಆಸ್ಪತ್ರೆಯಲ್ಲಿ ನಡೆಸಲಾಗುತ್ತದೆ. ಯಶಸ್ವಿನಿ ಮತ್ತು ಆರ್ಎಸ್ಬಿವೈ ಕಾರ್ಡ್ ಹೊಂದಿಲ್ಲದ ಬಡವರಿಗೆ ಎಸ್.ಎನ್.ಕ್ರಿಯಾ ಟ್ರಸ್ಟ್ ವತಿಯಿಂದ ಶಸ್ತ್ರಚಿಕಿತ್ಸೆಗೆ ನೆರವು ನೀಡಲಾಗುವುದು ಎಂದು ಹೇಳಿದರು.
ಕಣ್ಣಿನ ಪೊರೆಯಿದ್ದವರಿಗೆ ಅಂದೇ ಹೊಸಕೋಟೆಯ ಎಂ.ವಿ.ಜೆ ಆಸ್ಪತ್ರೆಯಲ್ಲಿ ಉಚಿತವಾಗಿ ಶಸ್ತ್ರಚಿಕಿತ್ಸೆಯನ್ನು ಮಾಡಲಾಗುತ್ತದೆ. ತಜ್ಞ ವೈದ್ಯರ ತಂಡವೇ ಇರುವುದರಿಂದ ಈ ಶಿಬಿರದಲ್ಲಿ ತಮ್ಮ ಆರೋಗ್ಯ ಪರೀಕ್ಷೆಯನ್ನು ಮಾಡಿಸಿಕೊಳ್ಳುವಂತೆ ಕೋರಿದರು.
ಎಸ್.ಎನ್.ಕ್ರಿಯಾ ಟ್ರಸ್ಟ್ನ ಛಲಪತಿ, ವಿಶ್ವನಾಥ ಈ ಸಂದರ್ಭದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!