21.1 C
Sidlaghatta
Thursday, July 31, 2025

ಜನರಲ್ಲಿ ಸಾಮರಸ್ಯ, ಮಾನಸಿಕ ನೆಮ್ಮದಿ ಮೂಡಲಿ

- Advertisement -
- Advertisement -

ಎಲ್ಲಾ ವರ್ಗದ ಜನರಲ್ಲಿ ಸಾಮರಸ್ಯ, ಮಾನಸಿಕ ನೆಮ್ಮದಿಯು ಧಾರ್ಮಿಕ ಕಾರ್ಯಗಳಿಂದ ಮೂಡಲಿದೆ ಎಂದು ಜಯಪ್ರಕಾಶ್ ನಾರಾಯಣ್ ಹಾಗೂ ಎಚ್.ಡಿ.ದೇವೇಗೌಡ ಸೇವಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷ ಬಿ.ಎನ್.ರವಿಕುಮಾರ್ ತಿಳಿಸಿದರು.
ತಾಲ್ಲೂಕಿನ ದಿಬ್ಬೂರಹಳ್ಳಿ ರಸ್ತೆಯ ಸೀತಹಳ್ಳಿ ಗೇಟ್ ನಿಂದ 72 ಬಸ್ಸುಗಳ ಮೂಲಕ ಮೇಲ್ ಮರವತ್ತೂರು ಓಂ ಶಕ್ತಿ ದೇವಾಲಯಕ್ಕೆ ತೆರಳಿದ 4000 ಕ್ಕೂ ಹೆಚ್ಚು ಭಕ್ತರಿಗೆ ಶುಭ ಹಾರೈಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಅಭಿವೃದ್ಧಿಗಿಂತ ಸ್ವ ಪ್ರತಿಷ್ಠೆಗಳ ಮೇಲೆ ಸರ್ಕಾರ ನಡೆಯುತ್ತಿದೆ. ಬಯಲು ಸೀಮೆ ಭಾಗಗಳಲ್ಲಿನ ಜನರ ಅಭಿವೃದ್ಧಿಯ ಕುರಿತು, ರಾಜ್ಯ ಸರ್ಕಾರಕ್ಕೆ ಚಿಂತನೆ ಇಲ್ಲದಂತಾಗಿದೆ. ಈವರೆಗೂ ರಾಜ್ಯದಲ್ಲಿ ಆಡಳಿತ ನಡೆಸಿರುವ ಯಾವ ಸರ್ಕಾರಗಳು ಬಯಲುಸೀಮೆ ಭಾಗದ ಕುರಿತು ಚಿಂತನೆ ನಡೆಸಿಲ್ಲ, ಆದ್ದರಿಂದ ಮುಂದಿನ ಚುನಾವಣೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕೆನ್ನುವ ಉದ್ದೇಶದಿಂದ ದೇವರದಲ್ಲಿ ಹರಕೆ ಹೊತ್ತುಕೊಂಡು ಉಚಿತ ಪ್ರವಾಸ ಯಾತ್ರೆಗಳನ್ನು ಆಯೋಜನೆ ಮಾಡಲಾಗುತ್ತಿದೆ ಎಂದರು.
ಜಿಲ್ಲಾ ಪಂಚಾಯಿತಿ ಸದಸ್ಯ ಬಂಕ್ ಮುನಿಯಪ್ಪ ಮಾತನಾಡಿ, ರಾಜ್ಯದಲ್ಲಿ ಜೆಡಿಎಸ್ ಹೊರತು ಪಡಿಸಿದರೆ, ಉಳಿದ ಯಾವುದೇ ಪಕ್ಷಗಳಿಗೆ ಅಭಿವೃದ್ಧಿಯ ಕಡೆಗೆ ಬದ್ಧತೆಯಿಲ್ಲದಂತಾಗಿದೆ. ಕುಮಾರಸ್ವಾಮಿ ಅವರ 20 ತಿಂಗಳ ಅಧಿಕಾರಾವಧಿಯಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಕ್ರಮಗಳು, ದೇಶಕ್ಕೆ ಮಾದರಿಯಾಗಿವೆ. ಗ್ರಾಮವಾಸ್ತವ್ಯದಂತಹ ಕಾರ್ಯಕ್ರಮಗಳನ್ನು ಕಾಂಗ್ರೆಸ್, ಬಿಜೆಪಿ ನಾಯಕರು ಅಳವಡಿಸಿಕೊಳ್ಳುತ್ತಿದ್ದಾರೆ. ರೈತರು, ಹಿಂದುಳಿದವರು, ಅಲ್ಪಸಂಖ್ಯಾತರು, ದಲಿತರು ಹೀಗೆ ಎಲ್ಲಾ ವರ್ಗದ ಜನರ ಕಲ್ಯಾಣಕ್ಕಾಗಿ ಅವರು ತರಲು ಉದ್ದೇಶಿಸಿರುವ ಯೋಜನೆಗಳು ರಾಜ್ಯದ ಚಿತ್ರಣವನ್ನೆ ಬದಲಾಯಿಸಲಿವೆ ಎಂದರು.
ಜಿಲ್ಲಾ ಪಂಚಾಯಿತಿ ಸದಸ್ಯೆ ತನುಜಾರಘು, ಗಂಜಿಗುಂಟೆ ಗ್ರಾಮ ಪಂಚಾಯಿತಿ ಸದಸ್ಯ ನರಸಿಂಹಮೂರ್ತಿ, ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕರಾದ ಪಿ.ಶಿವಾರೆಡ್ಡಿ, ಪಿ.ವಿ.ನಾಗರಾಜ್, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಎಚ್.ನರಸಿಂಹಯ್ಯ, ಸದಸ್ಯ ರಾಜಶೇಖರ್, ನಗರಸಭಾ ಸದಸ್ಯೆ ಸಂಧ್ಯಾ ಮಂಜುನಾಥ್, ಮುಖಂಡರಾದ ಕೆ.ಎಸ್.ಮಂಜುನಾಥ್, ಆರ್.ಎ.ಉಮೇಶ್, ಯರಬಚ್ಚಪ್ಪ, ಕದಿರಿ ಯೂಸೂಪ್, ಮಂಜುನಾಥ್, ವಿ.ಕೆಂಪಯ್ಯ, ಹುಜುಗೂರು ರಾಮಚಂದ್ರಪ್ಪ, ಚಂದ್ರೇಗೌಡ, ಮೇಲೂರು ಧರ್ಮೇಂದ್ರ, ರಾಮ್ ಬಾಬು, ಜೆ.ಎಂ.ವೆಂಕಟೇಶ್, ತಾದೂರು ರಘು, ಕನ್ನಮಂಗಲ ಚಿಕ್ಕಾಂಜಿನಪ್ಪ, ಮುಗಿಲಡಪಿ ನಂಜಪ್ಪ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!