ನಗರದಲ್ಲಿ ಜನದಟ್ಟಣೆ ಇರುವ ಕಡೆಗಳಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿ ಭೇಟಿ ನೀಡಿ, ಎಲ್ಲಡೆ ಮಕ್ಕಳ ಕಳ್ಳರು ಬಂದಿದ್ದಾರೆ ಎನ್ನುವ ಕುರಿತು ಹರಡಿರುವ ವದಂತಿಗಳಿಂದಾಗಿ ಜನರು ಭಯಭೀತರಾಗಿದ್ದಾರೆ. ಇಂತಹ ವದಂತಿಗಳಿಗೆ ಕಿವಿಗೊಡಬೇಡಿ, ಇದನ್ನೆ ನೆಪವಾಗಿ ಮಾಡಿಕೊಂಡು ಕೆಲವು ಅಮಾಯಕರ ಮೇಲೆ ನೇರವಾಗಿ ಹಲ್ಲೆ ನಡೆಸುವುದು, ಕಂಬಗಳಿಗೆ ಕಟ್ಟಿಹಾಕುವಂತಹ ಪ್ರಕರಣಗಳು ನಡೆಯುತ್ತಿವೆ. ಯಾರೇ ಅಪರಿಚಿತ ವ್ಯಕ್ತಿಗಳು ಕಂಡು ಬಂದಾಗ, ಅನುಮಾನಾಸ್ಪದವಾಗಿ ತಿರುಗಾಡುತ್ತಿರುವುದು ಕಂಡು ಬಂದರೆ ನೇರವಾಗಿ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಿ. ನಿಮ್ಮ ವ್ಯಾಪ್ತಿಯ ಬೀಟ್ ಪೊಲೀಸರಿಗೆ ಮಾಹಿತಿ ಕೊಡಿ. ಒಂದು ವೇಳೆ ಯಾರಾದರೂ ಕಾನೂನು ಕೈಗೆತ್ತಿಕೊಂಡರೆ ಅಂತಹವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜನರಲ್ಲಿ ಜಾಗೃತಿ ಮೂಡಿಸಿದರು ಮೂಡಿಸಿದರು.
ಪೊಲೀಸ್ ಇಲಾಖೆಯ ಅಧಿಕಾರಿಗಳಾದ ಎ.ಎಸ್.ಐ.ಕೃಷ್ಣಮೂರ್ತಿ, ಪೇದೆಗಳಾದ ರೆಡ್ಡಪ್ಪ, ವೆಂಕಟರೋಣಪ್ಪ ಹಾಜರಿದ್ದರು.